Advertisement

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಢಿಕ್ಕಿ; ರಾಜಸ್ಥಾನ ಮೂಲದ ಮೂವರ ಸಾವು

10:45 AM Jul 19, 2021 | Team Udayavani |

ಚಿತ್ರದುರ್ಗ: ಜಿಲ್ಲೆಯ ಐಮಂಗಲ ಬಳಿ ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿಯಾಗಿ, ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ

Advertisement

ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಯಾರಿಗೂ ಹೇಳ್ಬೇಡಿ ಎನ್ನುತ್ತಲೇ ‘ಈ ಮೂವರಲ್ಲಿ ಯಾರೂ ಸಿಎಂ ಆಗಬಹುದು’ ಎಂದ ನಳಿನ್ ಕಟೀಲ್!

ಮೃತಪಟ್ಟ ಮೂರು ಜನರೂ ರಾಜಸ್ಥಾನ ಮೂಲದವರು ಎನ್ನಲಾಗಿದ್ದು, ಈವರೆಗೆ ಮೃತರ ಬಗ್ಗೆ ನಿಖರ ಗುರುತು ಪತ್ತೆ ಆಗಿಲ್ಲ. ಇವರು ಬ್ರಿಜಾ ಕಾರಿಲ್ಲಿ ಪ್ರಯಾಣ ಮಾಡುತ್ತಿದ್ದರು.

 

Advertisement

ರಾಜಸ್ಥಾನದ ಜೈರಾಮ್ ( 28) ಹಾಗೂ ಅವರ ಪತ್ನಿ ಸುಶೀಲ (26), ಪುತ್ರ ಆಕಾಶ್ (4 ) ಮೃತರು. ರಾಜಾರಾಮ್ (28) ಹಾಗೂ ಕರಣ್ (8) ಎಂಬುವರಿಗೆ ಗಂಭೀರ ಗಾಯಗಳಾಗಿವೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಐಮಂಗಲ ಪೆಟ್ರೋಲ್ ಬಂಕ್ ಸಮೀಪ ಸೋಮವಾರ ನಸುಕಿನಲ್ಲಿ ಲಾರಿಯೊಂದು ನಿಂತಿತ್ತು. ಚಿತ್ರದುರ್ಗ ಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ:ಎಲ್ಲೂರು : ಕಾರು ಚರಂಡಿಗೆ ಬಿದ್ದು ಗ್ಯಾರೇಜ್ ಮಾಲಕ‌ ಸ್ಥಳದಲ್ಲೇ ಸಾವು

Advertisement

Udayavani is now on Telegram. Click here to join our channel and stay updated with the latest news.

Next