Advertisement

ಮರಕ್ಕೆ ಕಾರು ಢಿಕ್ಕಿ: ಹಿರೇಮಠದ ಸ್ವಾಮೀಜಿ ಪಾರು; ಚಾಲಕ ಸ್ಥಳದಲ್ಲೇ ಸಾವು

06:33 PM Apr 10, 2022 | Team Udayavani |

ಗದಗ: ಜಿಲ್ಲೆಯ ನರಗುಂದ ಹೊರವಲಯದಲ್ಲಿ ಮರಕ್ಕೆ ಕಾರು ಢಿಕ್ಕಿ ಹೊಡೆದಿದ್ದರಿಂದ ಸ್ವಾಮೀಜಿಯೊಬ್ಬರು ಗಾಯಗೊಂಡಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರವಿವಾರ ಸಂಭವಿಸಿದೆ.

Advertisement

ಕಾರು ಚಾಲಕ ವೀರೇಶ ಕುರುಡಗಿ (38)ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನರೇಗಲ್ ಹಿರೇಮಠ ಹಾಗೂ ಸವದತ್ತಿ ಮೂಡಿ ಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಗಾಯಗೊಂಡಿದ್ದು, ನರಗುಂದ ತಾಲೂಕು ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next