Advertisement

ಹೇಮಗುಡ್ಡ ಹತ್ತಿರ ಅಪಘಾತ ಒರ್ವ ಸಾವು , ಓರ್ವ ಗಂಭೀರ

07:00 PM Jan 02, 2023 | Team Udayavani |

ಗಂಗಾವತಿ: ಕಾರು ಢಿಕ್ಕಿ ಹೊಡೆದ ಪರಿಣಾಮ ಯುವಕನೊರ್ವ ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಹೇಮಗುಡ್ಡ ಹತ್ತಿರ ಜರುಗಿದೆ. ರಾಜ್ಯ ಹೆದ್ದಾರಿ ರಾಯಚೂರು – ಕೊಪ್ಪಳ ಹೆದ್ದಾರಿಯಲ್ಲಿ ಸೋಮವಾರ ಸಂಜೆ 4 ಗಂಟೆಗೆ ಹೊಲದಲ್ಲಿ ಕೆಲಸ ಮುಗಿಸಿ ಗ್ರಾಮಕ್ಕೆ ತೆರುಳುತ್ತಿರುವ ಸಂಧರ್ಭದಲ್ಲಿ ಹಿಂಬದಿಯಿಂದ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಹನುಮೇಶ (30) ಸ್ಥಳದಲ್ಲೆ ಮೃತಪಟ್ಟಿದ್ದಾರೆ.

Advertisement

ಮಾನಸಯ್ಯ (22) ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಗಂಗಾವತಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗುತ್ತಿದೆ.

ಶಾಸಕರ ಭೇಟಿ ಸಾಂತ್ವನ
ಅಪಘಾತದಲ್ಲಿ ಮೃತಪಟ್ಟವನ ಕುಟುಂಬಸ್ಥರು ಹಾಗೂ ಗಾಯಗೊಂಡವರನ್ನು ಶಾಸಕ ಪರಣ್ಣ ಮುನವಳ್ಳಿ ಆಸ್ಪತ್ರೆಗೆ ತೆರಳಿ ಸಾಂತ್ವನ ಹೇಳಿದರು. ಡಿಎಸ್ಪಿ ಉಜ್ಜನಕೊಪ್ಪ, ಸಿಪಿಐ ಮಂಜುನಾಥ, ವೈದ್ಯಾಧಿಕಾರಿ ಈಶ್ವರ ಸವಡಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next