Advertisement

ಕಂದಕಕ್ಕೆ ಉರುಳಿದ ಕಾರು: ಪ್ರಯಾಣಿಕರು ಪಾರು

10:26 PM Aug 03, 2023 | Team Udayavani |

ಬೆಳ್ತಂಗಡಿ: ಮಂಗಳೂರು-ಚಿಕ್ಕಮಗಳೂರು ಸಾಗುವ ರಾಷ್ಟ್ರೀಯ ಹೆದ್ದಾರಿ ಮುಂಡಾಜೆಯ ಕಾಪಿನಬಾಗಿಲು-ಪುಟ್ಟೆಂತಡ್ಕ ಎಂಬಲ್ಲಿ ಕಾರೊಂದು ರಸ್ತೆ ಬದಿಯ ಸುಮಾರು 40 ಅಡಿ ಆಳದ ಕಂದಕಕ್ಕೆ ಉರುಳಿದ ಘಟನೆ ಗುರುವಾರ ನಡೆದಿದೆ.

Advertisement

ಮೂಡಿಗೆರೆಯಿಂದ ಬೆಳ್ತಂಗಡಿ ಕಡೆ ಪ್ರಯಾಣಿಸುತ್ತಿದ್ದ ಕಾರು ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ತೀರಾ ಬಲಕ್ಕೆ ಚಲಿಸಿದಾಗ ರಸ್ತೆ ಬದಿಯ ತಡೆಗೋಡೆ ಇಲ್ಲದ ಕಂದಕಕ್ಕೆ ಉರುಳಿದೆ. ಈ ವೇಳೆ ಕಾರಿನಲ್ಲಿ ಎರಡು ಮಕ್ಕಳ ಸಹಿತ ಒಟ್ಟು ಐವರು ಪ್ರಯಾಣಿಸುತ್ತಿದ್ದವರು ಪವಾಡ ಸದೃಶವಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಮುಂಡಾಜೆ ಗ್ರಾ.ಪಂ. ಸದಸ್ಯ ಗಣೇಶ ಬಂಗೇರ, ಸಮಾಜ ಸೇವಕ ಸಚಿನ್‌ ಭಿಡೆ ಮತ್ತಿತರರು ತಕ್ಷಣ ಧಾವಿಸಿ ಕಾರಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿದರು. ಘಟನೆ ನಡೆದ ಸ್ಥಳದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ತಾತ್ಕಾಲಿಕ ತಡೆ ಬೇಲಿಯನ್ನು ರಚಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next