Advertisement

ನಲ್ಲೂರು: ಮರಕ್ಕೆ ಕಾರು ಢಿಕ್ಕಿ ; ಆರು ಮಂದಿಗೆ ಗಾಯ

08:48 PM Sep 07, 2020 | Hari Prasad |

ಕಾರ್ಕಳ: ಇಲ್ಲಿನ ನಲ್ಲೂರು ಸಮೀಪದ ಪರಪ್ಪಾಡಿ ಎಂಬಲ್ಲಿ ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿಯಾಗಿರುವ ಘಟನೆ ವರದಿಯಾಗಿದೆ.

Advertisement

ಈ ಕಾರು ಕಾರ್ಕಳ ಮಾರ್ಗವಾಗಿ ಬೆಂಗಳೂರು ಕಡೆಗೆ ತೆರಳುತ್ತಿತ್ತು ಮತ್ತು ಇದರಲ್ಲಿ ಆರು ಜನ ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಇಲ್ಲಿನ ಪರಪ್ಪಾಡಿ ತಿರುವಿನಲ್ಲಿ ಈ ಕಾರು ಸಂಚರಿಸುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಚಾಲಕನ ಸಹಿತ ಆರು ಮಂದಿಗೆ ಗಾಯಗಳಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ತಲೆಕೆಳಗಾಗಿ ಉರುಳಿಬಿದ್ದಿದೆ.

Advertisement

ಅಪಘಾತ ನಡೆದ ತಕ್ಷಣ ಕಾರಿನಲ್ಲಿ ಸಿಲುಕಿದ್ದವರನ್ನು ಸ್ಥಳೀಯರು ಹೊರಗೆ ತೆಗೆದು ಪ್ರಥಮ ಚಿಕಿತ್ಸೆಯನ್ನು ನೀಡಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಕಾರಿನಲ್ಲಿದ್ದವರ ಕುರಿತಾಗಿ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಿಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next