Advertisement

ಬೆಂಜನಪದವು: ಸ್ಕೂಟರ್ ಗೆ ಕಾರು ಢಿಕ್ಕಿ – ಯುವತಿ ಸಾವು ; ಸವಾರೆ ಗಂಭೀರ

10:43 PM Jun 24, 2020 | Hari Prasad |

ಬಂಟ್ವಾಳ: ಇಲ್ಲಿನ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಜನಪದವು ಎಂಬಲ್ಲಿ ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಮೃತಪಟ್ಟಿರುವ ದಾರುಣ ಘಟನೆ ಇಂದು ರಾತ್ರಿ ನಡೆದಿದೆ.

Advertisement

ಘಟನೆಯಲ್ಲಿ ಸ್ಕೂಟರ್ ಚಲಾಯಿಸುತ್ತಿದ್ದ ಯುವತಿಗೂ ಗಂಭೀರ ಗಾಯಗಳಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟ ಯುವತಿಯನ್ನು ಕಡೆಗೋಳಿ ನಿವಾಸಿ ಶ್ಯಾಮಲಾ (23) ಎಂದು ಗುರುತಿಸಲಾಗಿದೆ ಹಾಗೂ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನು ಈಕೆಯ ಸ್ನೇಹಿತೆ ಹರ್ಷಿತಾ ಎಂದು ಗುರುತಿಸಲಾಗಿದೆ.

ಇವರಿಬ್ಬರೂ ಬಿ.ಸಿ.ರೋಡ್ ನಿಂದ ಬೆಂಜನಪದವು ರಸ್ತೆಯ ಮೂಲಕ ಕಡೆಗೋಳಿ ಮನೆಗೆ ಹೋಗುತ್ತಿದ್ದ ವೇಳೆ ಬೆಂಜನಪದವು ಎಂಬಲ್ಲಿ ಎದುರಿನಿಂದ ಬಂದ ಕಾರು ಇವರ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.


ಅಪಘಾತದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದ ರು. ಕೂಡಲೇ ಸ್ಥಳೀಯರು ಅವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಿದರೂ ಗಂಭೀರವಾಗಿ ಗಾಯಗೊಂಡಿದ್ದ ಹಿಂಬದಿ ಸವಾರೆ ಶ್ಯಾಮಲಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Advertisement

ಶ್ಯಾಮಲಾ ಹಾಗೂ ಹರ್ಷಿತಾ ಅವರು ಬಿ.ಸಿ.ರೋಡಿನಲ್ಲಿರುವ ಕ್ಷೇತ್ರ ಸಂಪನ್ಮೂಲ ಕಚೇರಿಯಲ್ಲಿ ಕೆಲಸ ನಿರ್ವಹಿಸಿ ಮನೆಗೆ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನದ ಮುಂಭಾಗ ಸಮಪೂರ್ಣ ಕಳಚಿ ಬಿದ್ದಿದೆ. ಕಾರಿನ ಮುಂಭಾಗಕ್ಕೂ ಹಾನಿಯಾಗಿದ್ದು ಎರಡೂ ವಾಹನಗಳೂ ಈ ಅಪಘಾತದ ತೀವ್ರತೆಗೆ ಮೂಕಸಾಕ್ಷಿಯಾದಂತಿವೆ.

ಅಪಘಾತ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಠಾಣಾ ಎಸ್. ಐ.ರಾಜೇಶ್, ಎ.ಎಸ್.ಐ.ಬಾಲಕೃಷ್ಣ, ಸಿಬ್ಬಂದಿ ಮನೋಹರ ಬೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.


Advertisement

Udayavani is now on Telegram. Click here to join our channel and stay updated with the latest news.

Next