Advertisement

ನಿಂತಿದ್ದ ಟ್ರಕ್ ಗೆ ಢಿಕ್ಕಿ ಹೊಡೆದ ಎಸ್ ಯುವಿ: ಮದುವೆ ಮನೆಯಿಂದ ಬರುತ್ತಿದ್ದ 8 ಮಂದಿ ಸಾವು!

10:23 AM May 22, 2022 | Team Udayavani |

ಲಕ್ನೋ: ಉತ್ತರ ಪ್ರದೇಶದ ಸಿದ್ಧಾರ್ಥ ನಗರದಲ್ಲಿ 11 ಜನರಿದ್ದ ಎಸ್‌ಯುವಿ ವಾಹನವು ನಿಂತಿದ್ದ ಟ್ರಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಭಾನುವಾರ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ.

Advertisement

ಅಪಘಾತದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಗೋರಖ್‌ಪುರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ಗೋಡೆ ಕೊರೆದು 5 ಕೆ.ಜಿ ಚಿನ್ನ ದೋಚಿದ 10 ಮಂದಿ ಅಂತಾರಾಜ್ಯ ಕಳ್ಳರ ಬಂಧನ

ಕಾರು ಮದುವೆಯ ಮೆರವಣಿಗೆಯಿಂದ ಹಿಂತಿರುಗುತ್ತಿತ್ತು. ಜೋಗಿಯಾ ಕೊಟ್ವಾಲಿ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ.

ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next