Advertisement

ಕಾರು- ಟ್ಯಾಂಕರ್ ಅಪಘಾತ: ಉಪನ್ಯಾಸಕಿ ಸೇರಿ ಇಬ್ಬರು ಸಾವು, ಓರ್ವ ಗಂಭೀರ

10:04 AM Feb 10, 2020 | keerthan |

ಉಪ್ಪಿನಂಗಡಿ: ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಒರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರವಿವಾರ ಉಪ್ಪಿನಂಗಡಿ ಬಳಿಯ ಬೆದ್ರೋಡಿಯಲ್ಲಿ ನಡೆದಿದೆ.

Advertisement

ಮೃತಪಟ್ಟವರನ್ನು ನೆಲ್ಯಾಡಿಯ ಉದ್ಯಮಿ ಯು.ಪಿ ವರ್ಗೀಸ್ ಅವರ ಸೊಸೆ ಕಾಂಚನ ನಿವಾಸಿ ಶಾಜಿ ಎಂಬವರ ಪತ್ನಿ ಜೈನಿ ಶಾಜಿ (30) ಮತ್ತು ಜಿಸನ್ (40) ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಶರ್ವಿನ್ ಶಾಜಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈತ ಒಂಬತ್ತನೇ ತರಗತಿ ವಿದ್ಯಾರ್ಥಿ ಎನ್ನಲಾಗಿದೆ.

ಇದರಲ್ಲಿ ಜಿಸನ್ ಎಂಬವರು ಜೈನಿಯವರ ಅಣ್ಣನಾಗಿದ್ದು ಧರ್ಮಗುರುದೀಕ್ಷೆ ಪಡೆಯಲು ತರಬೇತಿಯಲ್ಲಿದ್ದರು ಎನ್ನಲಾಗಿದೆ. ಜೈನಿ ಅವರು ಸ್ಥಳೀಯ ಕಾಲೇಜೊಂದರಲ್ಲಿ ಉಪನ್ಯಾಸಕಿಯಾಗಿದ್ದರು.

Advertisement

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬೆದ್ರೋಡಿ ಎಂಬಲ್ಲಿ ಈ ಅಪಘಾತ ನಡೆದಿದ್ದು ಕಾರು ಉಪ್ಪಿನಂಗಡಿ ಕಡೆ ಸಂಚರಿಸುವಾಗ ವಿರುದ್ದ ದಿಕ್ಕಿನಲ್ಲಿ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದೆ.

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next