Advertisement

ಮದುವೆ ಆಹ್ವಾನ ಪತ್ರಿಕೆ ನೀಡಲು ತಂದಿದ್ದ ಕಾರನ್ನೇ ಕದ್ದೊಯ್ದ ಕಳ್ಳರು

12:21 PM Jan 26, 2021 | Team Udayavani |

ಯಳಂದೂರು: ಆಹ್ವಾನ ಪತ್ರಿಕೆ ನೀಡಲು ದೂರದ ತಮಿಳುನಾಡಿನ ಕೊಯಮತ್ತೂರಿನಿಂದ ತಂದಿದ್ದ ಕಾರನ್ನು ರಾತ್ರೋರಾತ್ರಿ ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ತಾಲೂಕಿನ ಮೆಳ್ಳಹಳ್ಳಿ ಗ್ರಾಮದಲ್ಲಿ ಜರುಗಿದೆ.

Advertisement

ಕೊಯಮತ್ತೂರಿನಲ್ಲಿರುವ ವೆಂಕಟೇಶಕೀರ್ತಿ ಎಂಬುವವರು ತಮ್ಮ ತಂಗಿಯ ವಿವಾಹ ಆಹ್ವಾನ ಪತ್ರಿಕೆಯನ್ನು ನೀಡಲು ಶನಿವಾರ ಸಂಜೆ ಯಳಂದೂರಿಗೆ ಬಂದಿದ್ದಾರೆ. ಇಲ್ಲಿನ ಮೀರೆ ಸಿದ್ದರಾಜು ಎಂಬುವವರಿಗೆ ಆಹ್ವಾನ ಪತ್ರಿಕೆ ನೀಡಿ ನಂತರ ಮೆಳ್ಳಹಳ್ಳಿ ಗ್ರಾಮದಲ್ಲಿರುವ ತಮ್ಮ ಅಜ್ಜಿ ಮನೆಗೆ ತೆರಳಿದ್ದಾರೆ. ಸಂಜೆಯಾಗಿದ್ದರಿಂದ ಅಲ್ಲೇ ವಾಸ್ತವ್ಯ ಹೂಡಿ ತಮ್ಮ ಅಜ್ಜಿ ಮನೆಯಲ್ಲಿ ತಂಗಿದ್ದಾರೆ.

ಮನೆ ಮುಂಭಾಗದಲ್ಲಿ ಕಾರನ್ನು ನಿಲ್ಲಿಸಿದ್ದರು. ಮಧ್ಯರಾತ್ರಿ ಕಳ್ಳರು ಬಂದು ಕಾರನ್ನು ಕದ್ದು ಪರಾರಿಯಾಗಿದ್ದಾರೆ.
ವೆಂಕಟೇಶಕೀರ್ತಿ ತಮ್ಮ ಸ್ನೇಹಿತ ತಮಿಳುನಾಡಿದ ಗುಣಶೇಖರ್‌ಗೆ ಸೇರಿದ ಮಾರುತಿ ಸ್ವಿಫ್ಟ್ ಟಿ.ಎನ್‌. 38 ಬಿ.ಪಿ 3555 ಸಂಖ್ಯೆ ಕಾರಿನಲ್ಲಿ ಬಂದಿದ್ದರು. ಆದರೆ ರಾತ್ರೋರಾತ್ರಿ ಕಾರು ಕಳ್ಳತನವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿ:ಲಂಚ ಪ್ರಕರಣ: ಕಂದಾಯ ಸಚಿವ ಅಶೋಕ್ ಪಿಎ ವಿರುದ್ಧ ದೂರು ದಾಖಲು

ಈ ಬಗ್ಗೆ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ಥಳೀಯ ಪೊಲೀಸರು ದೂರು ದಾಖಲಿಸಿಕೊಂಡು ಸ್ಥಳ ಪರಿಶೀಲನೆ ನಡೆಸಿ ಕ್ರಮ ವಹಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next