Advertisement

ಉಳ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಪಲ್ಟಿಯಾದ ಕಾರು

09:14 AM Jan 09, 2021 | Team Udayavani |

ತೆಕ್ಕಟ್ಟೆ: ಇಲ್ಲಿನ ಉಳ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ತಿರುವಿನಲ್ಲಿ ಅತೀ ವೇಗದಿಂದ ಬಂದ ಸ್ವಿಫ್ಟ್ ಕಾರೊಂದು ಚಾಲಕನ ‌ನಿಯಂತ್ರಣ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಪಲ್ಟಿಯಾದ ಘಟನೆ ತಡರಾತ್ರಿ ಸಂಭವಿಸಿದೆ.

Advertisement

ಮಣೂರು ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನ ದ ದರ್ಶನ ಮುಗಿಸಿ ಹೆಸ್ಕುತ್ತೂರಿನ‌ ಕಡೆಗೆ ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.

ಇದನ್ನೂ ಓದಿ:ಪಡುಕರೆ: ವಿಶ್ವದರ್ಜೆ ಮರೀನಾ ನಿರ್ಮಾಣಕ್ಕೆ ಸ್ಥಳ ಗುರುತು

ಘಟನೆಯ ತೀವ್ರತೆಗೆ ಕಾರು ಪಲ್ಟಿಯಾಗಿ ಜಖಂಗೊಂಡಿದೆ.

Advertisement

ಅಪಾಯಕಾರಿ ವಿದ್ಯುತ್ ಕಂಬಗಳು: ಉಳ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಹೊಸದಾಗಿ ಹಾಕಲಾದ ವಿದ್ಯುತ್ ಕಂಬಗಳು ರಸ್ತೆ ಗೆ ಅತ್ಯಂತ ಸಮೀಪವಾಗಿದ್ದು, ಕಳೆದ ಒಂದು ವರ್ಷದಿಂದಲೂ ಯಾವುದೇ ವಿದ್ಯುತ್ ಸಂಪರ್ಕ ತಂತಿಗಳನ್ನು ಅಳವಡಿಸದೇ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ. ಇಂತಹ ಬಳಕೆ ಇಲ್ಲದ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next