Advertisement

ಪಾವಂಜೆ ಸೇತುವೆ ಬಳಿ ನಂದಿನಿ ನದಿಗೆ ಜಾರಿದ ಕಾರು: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

11:50 AM Jan 05, 2021 | Team Udayavani |

ಹಳೆಯಂಗಡಿ: ರಾಷ್ಟ್ರೀಯ ಹೆದ್ದಾರಿ 66ರ ಪಾವಂಜೆ ಸೇತುವೆ ಬಳಿಯ ನದಿ ತೀರದ ರಸ್ತೆಯಲ್ಲಿ ಸಂಚರಿಸುತಿದ್ದ ಕಾರು ಹಠಾತ್ತನೆ ನಂದಿನಿ ನದಿಗೆ ಜಾರಿ, ಮುಳುಗಿದ ಘಟನೆ ಮಂಗಳವಾರ ನಡೆದಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಈರ್ವರು ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದೆ.

Advertisement

ಕೃಷ್ಣಾಪುರ ಕಾಟಿಪಳ್ಳದ ನಿವಾಸಿ ಅಶ್ರಫ್ ಮತ್ತು ಆತನ ಸ್ನೇಹಿತನೊಂದಿಗೆ ಪಾವಂಜೆ ಬಳಿಯ ಅರಾಂದ್ ಎಂಬ ಸ್ಥಳಕ್ಕೆ ತೆರಳಿ ವಾಪಾಸ್ಸು ಬರುವ ಹೊತ್ತಿಗೆ ಹಠಾತ್ತನೆ ರಸ್ತೆ ಪಕ್ಕದ ನಂದಿನಿ ನದಿಗೆ ಕಾರು ಜಾರಿ ನದಿಯಲ್ಲಿ ಮುಳುಗುತ್ತಿರುವಾಗಲೆ ಅಶ್ರಫ್ ಮತ್ತು ಅವರ ಸ್ನೇಹಿತ ಕಾರ್ ನಿಂದ ಹೊರಬಂದು ಈಜಿ ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾರೆ.

ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ಬಳಿಕ ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಸಹಾಯದಿಂದ ಕ್ರೇನ್ ಮೂಲಕ ಕಾರನ್ನು ನದಿಯಿಂದ ಮೇಲೆಕ್ಕೆತ್ತಿದರು.

Advertisement

Udayavani is now on Telegram. Click here to join our channel and stay updated with the latest news.

Next