Advertisement

ಸವಣೂರು ಅಟ್ಟೋಳೆಯಲ್ಲಿ ಕಾರು ಪಲ್ಟಿ

01:07 AM May 26, 2019 | Team Udayavani |

ಸವಣೂರು: ಸುಬ್ರ ಹ್ಮಣ್ಯ – ಮಂಜೇಶ್ವರ ರಾಜ್ಯ ಹೆದ್ದಾರಿಯ ಸವಣೂರು ಸಮೀಪದ ಅಟ್ಟೋಳೆ ಯಲ್ಲಿ ಕೇರಳ ನೋಂದಣಿಯ ಮಾರುತಿ ಸೆಲೆರಿಯೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.
ಕಾಣಿಯೂರು ಭಾಗದಿಂದ ಪುತ್ತೂರು ಕಡೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಬಲಬದಿಯ ಬರೆಗೆ ಢಿಕ್ಕಿಯಾಗಿದೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಕಾರಿನಲ್ಲಿ ಕನ್ಯಾನ ಮೂಲದ ಕುಟುಂ ಬವೊಂದರ ಐವರು ಪ್ರಯಾಣಿಸು ತ್ತಿದ್ದು, ಅದರಲ್ಲಿದ್ದ ಪುಟ್ಟ ಮಗುವಿನ ಕಾಲಿಗೆ ತೀವ್ರ ಸ್ವರೂಪದ ಗಾಯಗಳಾ ಗಿವೆ ಹಾಗೂ ಇತರ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಾಳುಗಳನ್ನು ಕಾಣಿಯೂರಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ನಡೆದ ಕೂಡ ಲೇ ಆ ದಾರಿಯಲ್ಲಿ ತೆರಳುತ್ತಿದ್ದ ಹಸೈನಾರ್‌ ಮುಟ್ರ, ಇಬ್ರಾಹಿಂ ಕೂರ ಮತ್ತಿತರರು ತಮ್ಮ ಕಾರಿನಲ್ಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಸ್ಥಳಕ್ಕೆ ಬೆಳ್ಳಾರೆ ಪೊಲೀ ಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next