Advertisement

ಸಮರೋಪಾದಿಯಲ್ಲಿ ರಕ್ಷಣೆ,ಪರಿಹಾರ ಕಾರ್ಯ ಕೈಗೊಳ್ಳಿ

06:00 AM Aug 19, 2018 | Team Udayavani |

ಬೆಂಗಳೂರು: ಕೊಡಗು ಸೇರಿ ಮಳೆಯಿಂದ ತೊಂದರೆಗೊಳಗಾಗಿರುವ ಜಿಲ್ಲೆಗಳಲ್ಲಿ ಸಮರೋಪಾದಿಯಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಆಗ್ರಹಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರಾವಳಿ-ಮಲೆನಾಡು ಪ್ರದೇಶಗಳಲ್ಲಿ ಹಿಂದೆಂದೂ ಕಂಡು ಕೇಳರಿಯದಷ್ಟು ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಅಯೋಮಯ ಪರಿಸ್ಥಿತಿ ನಿರ್ಮಾಣವಾಗಿದೆ.

ವಿಶೇಷವಾಗಿ ಕೊಡಗು ಜಿಲ್ಲೆಯ ಪರಿಸ್ಥಿತಿ ಕೈ ಮೀರುವ ಹಂತ ತಲುಪಿದೆ. ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಲು ಸಿದಟಛಿವಿದ್ದು, ಕೂಡಲೇ ರಾಜ್ಯ ಸರ್ಕಾರ ತುರ್ತಾಗಿ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕು. ಪ್ರವಾಹ ಪೀಡಿತ ಪ್ರದೇಶದ ನಾಗರಿಕರ ರಕ್ಷಣೆಗೆ ಧಾವಿಸಬೇಕೆಂದು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next