Advertisement

ಹುಷಾರ್‌..ರಸ್ತೆ ವಧ್ಯೆ ಇದೆ ವಿದ್ಯುತ್‌ ಕಂಬ

04:10 PM May 06, 2019 | Team Udayavani |

ಹಾವೇರಿ: ಕೆಲ ರಸ್ತೆ ಮಧ್ಯೆ ಗುಂಡಿಗಳು ಇರುವುದು, ಇನ್ನು ಕೆಲ ರಸ್ತೆಗಳ ಮಧ್ಯೆಯೇ ಕಾಲುವೆ ಇರುವುದನ್ನೂ ನೋಡಿದ್ದೇವೆ. ಆದರೆ, ರಸ್ತೆ ಮಧ್ಯೆಯೇ ವಿದ್ಯುತ್‌ ಕಂಬ ಇರುವುದು ಕಾಣುವುದು ಅಪರೂಪ. ಇಂಥ ಅಪರೂಪದ ದೃಶ್ಯ ನೋಡಬೇಕೆಂದರೆ ಇಲ್ಲಿಯ ವಿದ್ಯಾನಗರದ ಪಶ್ಚಿಮ ಬಡಾವಣೆಯ ಎರಡನೇ ಕ್ರಾಸ್‌ಗೆ ಬರಬೇಕು.!

Advertisement

ಇಲ್ಲಿ ರಸ್ತೆ ಮಧ್ಯೆ ಇರುವ ವಿದ್ಯುತ್‌ ಕಂಬವನ್ನು ಸ್ಥಳಾಂತರಿಸದೆ ಕಂಬ ಅಲ್ಲಿಯೇ ಇರಲು ಬಿಟ್ಟು ರಸ್ತೆಯ ಡಾಂಬರೀಕರಣ ಮಾಡಿದ್ದು ಇದು ಅಧಿಕಾರಿಗಳ ದಿವ್ಯ ನಿರ್ಲಕ್ಷ ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ರಸ್ತೆಯ ಮಧ್ಯದಲ್ಲಿಯೇ ಹಲವಾರು ವರ್ಷಗಳಿಂದ ವಿದ್ಯುತ್‌ ಕಂಬವಿದ್ದರೂ ಇದನ್ನು ಸಂಬಂಧಪಟ್ಟ ಇಲಾಖೆ ಸ್ಥಳಾಂತರಿಸುವ ಗೋಜಿಗೆ ಹೋಗಿಲ್ಲ. ಪರಿಣಾಮ ಇಲ್ಲಿಯ ನಿವಾಸಿಗಳು ನಿತ್ಯ ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ.

ರಾತ್ರಿ ಸಮಯದಲ್ಲಿ ಪರಸ್ಥಳಗಳಿಂದ ಬರುವ ಜನರು, ವಾಹನ ಸವಾರರು ವಿದ್ಯುತ್‌ ಕಂಬ ಕಾಣದೇ ಅವಘಡಗಳು ಸಂಭವಿಸಿದ ಘಟನೆಗಳು ಸಾಕಷ್ಟು ನಡೆದಿವೆ ಎನ್ನುತ್ತಾರೆ ಇಲ್ಲಿನ ಸ್ಥಳೀಯರು. ರಸ್ತೆ ಮಧ್ಯದಲ್ಲಿಯೇ ವಿದ್ಯುತ್‌ ಕಂಬ ಬಂದಿರುವುದರಿಂದ ದೊಡ್ಡ ವಾಹನಗಳಿಗೆ ಈ ರಸ್ತೆಯಲ್ಲಿ ಸಂಚಾರಕ್ಕೆ ನಿರ್ಬಂಧಿಸಿದಂತಾಗಿದೆ.

ಸ್ಥಳಾಂತರಿಸದೇ ಡಾಂಬರೀಕರಣ:

Advertisement

ಇಲ್ಲಿಯ ನಿವಾಸಿಗಳು ವಿದ್ಯುತ್‌ ಕಂಬ ಸ್ಥಳಾಂತರಗೊಳಿಸುವಂತೆ ನಗರಸಭೆ ಹಾಗೂ ಹೆಸ್ಕಾಂ ಕಚೇರಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಸಂಬಂಧಪಟ್ಟ ಇಲಾಖೆ ವಿದ್ಯುತ್‌ ಕಂಬ ಸ್ಥಳಾಂತರಕ್ಕೆ ಕ್ರಮ ಕೈಗೊಂಡಿಲ್ಲ. ಕಳೆದ ಹಲವಾರು ವರ್ಷಗಳಿಂದ ರಸ್ತೆಯಲ್ಲಿ ವಿದ್ಯುತ್‌ ಕಂಬ ಅಡ್ಡ ಬಂದಿದ್ದರಿಂದ ರಸ್ತೆ ಅಭಿವೃದ್ಧಿ ಕಾರ್ಯಕ್ಕೂ ಅಡ್ಡಿಯಾಗಿತ್ತು. ಆದರೆ, ಈಗ ರಸ್ತೆ ಮಧ್ಯೆ ವಿದ್ಯುತ್‌ ಕಂಬ ಇದ್ದರೂ ಕೂಡ ಅದನ್ನು ಅಲ್ಲಿಯೇ ಹಾಗೆಯೇ ಬಿಟ್ಟು ರಸ್ತೆಯನ್ನು ಡಾಂಬರೀರಣಗೊಳಿಸಿ ಅಭಿವೃದ್ಧಿ ಪಡಿಸಲಾಗಿದೆ.

ರಸ್ತೆ ಮಧ್ಯದ ಕಂಬವನ್ನು ಸ್ಥಳಾಂತರಿಸುವಂತೆ ನಗರಸಭೆ ಅಧ್ಯಕ್ಷೆ, ಸದಸ್ಯರಿಗೆ, ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೂ ಮನವಿ ಸಲ್ಲಿಸಲಾಗಿದೆ. ಆದರೆ, ನಗರಸಭೆಯವರು ವಿದ್ಯುತ್‌ ಕಂಬ ಸ್ಥಳಾಂತರಿಸುವುದು ಹೆಸ್ಕಾಂನವರ ಕೆಲಸ ಎಂದು ಸಬೂಬು ನೀಡುತ್ತಾರೆ. ಆದರೆ, ಹೆಸ್ಕಾಂ ಇಲಾಖೆ ಅಧಿಕಾರಿಗಳು ಇದು ನಗರಸಭೆಗೆ ಸಂಬಂಧಪಟ್ಟದು ಎಂದು ಹೇಳುತ್ತಿದ್ದಾರೆ. ಇದರಿಂದಾಗಿ ಇಲ್ಲಿನ ನಿವಾಸಿಗಳಿಗೆ ಸಮಸ್ಯೆ ಸಮಸ್ಯೆಯಾಗಿಯೇ ಉಳಿದಿದ್ದು, ಯಾರೂ ವಿದ್ಯುತ್‌ ಕಂಬ ಸ್ಥಳಾಂತಕ್ಕೆ ಮುಂದಾಗುತ್ತಿಲ್ಲ. ಪರಿಣಾಮ ಇಲ್ಲಿನ ನಿವಾಸಿಗಳು ನಿತ್ಯ ಹೆಸ್ಕಾಂ ಹಾಗೂ ನಗರಸಭೆ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next