Advertisement

Road mishap: ಮುನಿಯಾಲು; ಕಾರುಗಳು ಮುಖಾಮುಖಿ ಢಿಕ್ಕಿಯಾಗಿ ಚಾಲಕ ಸಾವು

09:40 PM Feb 29, 2024 | Team Udayavani |

ಅಜೆಕಾರು: ಎರಡು ಕಾರುಗಳು ಮುಖಾಮುಖಿ ಢಿಕ್ಕಿ ಹೊಡೆದು ಓರ್ವ ಕಾರು ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪಿದ ಘಟನೆ ವರಂಗ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮುನಿಯಾಲು ಪೇಟೆಯಲ್ಲಿ ಗುರುವಾರ ಸಂಜೆ ಸಂಭವಿಸಿದೆ.

Advertisement

ಮುನಿಯಾಲಿನ ಜಗದೀಶ್‌ ಆಚಾರ್‌ ಮೃತಪಟ್ಟವರು.

ಒಂದು ಕಾರು ಚಟ್ಕಲ್‌ ಪಾದೆಯಿಂದ ಮುನಿಯಾಲು ಕಡೆಗೆ ಮತ್ತೂಂದು ಕಾರು ಕಾರ್ಕಳದಿಂದ ಹೆಬ್ರಿ ಕಡೆಗೆ ಸಾಗುತ್ತಿತ್ತು. ಮಹಿಳೆಯೊಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಸರಣಿ ಅಪಘಾತ :

ಈ ಭಾಗದಲ್ಲಿ ಒಂದು ತಿಂಗಳಲ್ಲಿ ಎಂಟು ಅಪಘಾತಗಳು ಸಂಭವಿಸಿವೆ.  ಕಾಡುಹೊಳೆ – ಮುನಿಯಾಲು – ಚಟ್ಕಲ್‌ ಪಾದೆ ಮುಖ್ಯ ರಸ್ತೆ  ಚತುಷ್ಪಥವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಆದರೆ ಕಳೆದ ಒಂದೂವರೆ ವರ್ಷಗಳಲ್ಲಿ ವಿಸ್ತರಣೆ ಕಾಮಗಾರಿ ನಡೆಯುತಿದ್ದರೂ ಇನ್ನೂ ಪೂರ್ಣ ಗೊಂಡಿಲ್ಲ. ಇಕ್ಕೆಲಗಳಲ್ಲಿ ಎಲ್ಲಿಯೂ ಎಚ್ಚರಿಕೆಯ ಫಲಕ ಅಳವಡಿಸಿಲ್ಲ. ಇದರಿಂದಾಗಿ ಸರಣಿ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next