Advertisement

ಕಾಂಕ್ರೀಟ್‌ ಕಾಡಿನಲ್ಲಿ ಕಾರ್ಟೂನ್‌ ಕಲರವ

03:18 PM Aug 25, 2018 | |

ಕರ್ನಾಟಕ ವ್ಯಂಗ್ಯಚಿತ್ರಕಾರರ ಸಂಘದಿಂದ ರಾಜ್ಯಮಟ್ಟದ ವ್ಯಂಗ್ಯಚಿತ್ರ ಸಮ್ಮೇಳನ ನಡೆಯುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎನ್‌.ಆರ್‌.ವಿಶುಕುಮಾರ್‌ ಉದ್ಘಾಟಿಸಲಿದ್ದು, ಹಿರಿಯ ವ್ಯಂಗ್ಯಚಿತ್ರಕಾರ ಬಿಜಿ ಗುಜ್ಜಾರಪ್ಪ ಹಾಗೂ ವ್ಯಂಗ್ಯಚಿತ್ರಕಾರರ ಸಂಘದ ಅಧ್ಯಕ್ಷ ವಿ.ಆರ್‌. ಚಂದ್ರಶೇಖರ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿ¨ªಾರೆ. ಕರ್ನಾಟಕ ಲಲಿತಕಲಾ ಅಕಾಡೆಮಿಯ ಅಧ್ಯಕ್ಷೆ ಎಂ.ಜೆ. ಕಮಲಾಕ್ಷಿ ಅಧ್ಯಕ್ಷತೆ ವಹಿಸಲಿ¨ªಾರೆ. ಇದೇ ಸಂದರ್ಭದಲ್ಲಿ ವ್ಯಂಗ್ಯಚಿತ್ರದ ಪುಸ್ತಕ ಬಿಡುಗಡೆ ಹಾಗೂ ಹಿರಿಯ ವ್ಯಂಗ್ಯಚಿತ್ರಕಲಾವಿದ ಸು.ವಿ. ಮೂರ್ತಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. 

Advertisement

ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ವ್ಯಂಗ್ಯಚಿತ್ರ ಕಲೆ ಕುರಿತಾದ ವಿಚಾರ ಸಂಕಿರಣ, ವ್ಯಂಗ್ಯಚಿತ್ರ ಕಾರ್ಯಾಗಾರ ನಡೆಯಲಿದೆ. ಕಲಾವಿಮರ್ಶಕ ಎಚ್‌.ಎ. ಅನಿಲ್‌ಕುಮಾರ್‌, ಸುಧಾ ವಾರಪತ್ರಿಕೆಯ ಸಹಾಯಕ ಸಂಪಾದಕ ಬಿ.ಎಂ. ಹನೀಫ್, ವ್ಯಂಗ್ಯಚಿತ್ರಕಾರರಾದ ಪ್ರಕಾಶ್‌ ಶೆಟ್ಟಿ, ಬಾಬು ಜತ್ತಕರ್‌, ನಟರಾಜ್‌ ಅರಳಸುರಳಿ ಭಾಗವಹಿಸಲಿ¨ªಾರೆ. ಸಮ್ಮೇಳನದಲ್ಲಿ ಪ್ರದರ್ಶನಗೊಂಡ ವ್ಯಂಗ್ಯಚಿತ್ರಗಳನ್ನು ಆಗಸ್ಟ್‌ 28ರಿಂದ ಸೆಪ್ಟೆಂಬರ್‌1ರವರೆಗೆ, ಎಂ.ಜಿ.ರಸ್ತೆಯಲ್ಲಿರುವ ಭಾರತೀಯ ವ್ಯಂಗ್ಯಚಿತ್ರ ಗ್ಯಾಲರಿಯಲ್ಲಿ ಪ್ರದರ್ಶನಕ್ಕಿಡಲಾಗುವುದು. 

ಎಲ್ಲಿ?: ವರ್ಣ ಆರ್ಟ್‌ ಗ್ಯಾಲರಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ
ಯಾವಾಗ?: ಆಗಸ್ಟ್‌ 25- 26,  
 

Advertisement

Udayavani is now on Telegram. Click here to join our channel and stay updated with the latest news.

Next