Advertisement
ಸಿಸಿಬಿ ಘಟಕದ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿ ಹಾಗೂ ಸಿಬ್ಬಂದಿ ತಂಡವು ಇತ್ತೀಚೆಗೆ ನಗರದ ಬಾಣಸವಾಡಿ, ರಾಮಮೂರ್ತಿ ನಗರ, ಕೆ.ಆರ್.ಪುರ, ಸೋಲದೇವನಹಳ್ಳಿ, ಬಾಗಲಗುಂಟೆ, ಕಾಡುಗೋಡಿ, ಬೇಗೂರು, ಬೊಮನಹಳ್ಳಿ, ಪರಪ್ಪನ ಅಗ್ರಹಾರ, ವಿದ್ಯಾರಣ್ಯಪುರ ಹಾಗೂ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿತ್ತು. ಆ ಸಂದರ್ಭದಲ್ಲಿ ವಿದೇಶಿಯರ ಕಾಯ್ದೆ ನಿಯಮ ಗಳನ್ನು ಉಲ್ಲಂಘಿಸಿ ವಿದೇಶಿ ಪ್ರಜೆಗಳಿಗೆ ಮನೆಗಳನ್ನು ಬಾಡಿಗೆಗೆ ನೀಡಿದ್ದ 20 ಮಂದಿ ಮಾಲಿಕರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Bengaluru: ಅಕ್ರಮವಾಗಿ ವಿದೇಶಿಗರಿಗೆ ಮನೆ ಬಾಡಿಗೆಗೆ ನೀಡಿದ 20 ಮಾಲಿಕರ ವಿರುದ್ಧ ಪ್ರಕರಣ
11:16 AM Jun 12, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.