Advertisement

ಲಾಕ್ ಡೌನ್ ಉಲ್ಲಂಘನೆ ಆರೋಪ: ಮಾಜಿ ಸಚಿವ ಶರಣಪ್ರಕಾಶ್ ಸೇರಿ 23 ಜನರ ವಿರುದ್ಧ ಕೇಸ್

08:31 AM May 16, 2020 | keerthan |

ಕಲಬುರಗಿ: ಲಾಕ್ ಡೌನ್ ಉಲ್ಲಂಘಿಸಿ ಸಾರ್ವಜನಿಕ ಸಭೆ ನಡೆಸಿದ ಆರೋಪ ಹಿನ್ನೆಲೆಯಲ್ಲಿ ಮಾಜಿ ಸಚಿವ, ಕಾಂಗ್ರೆಸ್ ‌ಮುಖಂಡ ಡಾ.ಶರಣಪ್ರಕಾಶ್ ಪಾಟೀಲ್ ಸೇರಿ 23 ಜನ ಮುಖಂಡರ ವಿರುದ್ಧ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೇಪೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಸುಲೇಪೇಟ್ ಪಟ್ಟಣದ ಕಲ್ಯಾಣ ಮಂಟಪದಲ್ಲಿ ಮೇ 13ರಂದು ಕೋವಿಡ್-19 ಸೋಂಕು ನಿಯಂತ್ರಣ ಹಾಗೂ ಜನರ ಸಂಕಷ್ಟ ಆಲಿಸುವ ನೆಪದಲ್ಲಿ ಸಾರ್ವಜನಿಕ ಸಭೆ ನಡೆಸಿದ ಆರೋಪದಡಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿ ಮಾಡಲು ಜಿಲ್ಲಾಡಳಿತ ಹೋಬಳಿವಾರು ಸೆಕ್ಟರಲ್ ಮ್ಯಾಜಿಸ್ಟ್ರೇಟ್ ಗಳನ್ನು ನೇಮಿಸಿದ್ದು, ಸುಲೇಪೇಟ್ ಅಧಿಕಾರಿ ಮುನೀರ್ ಅಹ್ಮದ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಡಾ.ಶರಣ ಪ್ರಕಾಶ್ ಪಾಟೀಲ್, ಮುಖಂಡರಾದ ನಾಗೇಶ್ವರ ರಾವ, ವೆಂಕಟ್ ರಾಮರೆಡ್ಡಿ, ನಾಗರೆಡ್ಡಿ, ಪ್ರತಾಪ್ ರೆಡ್ಡಿ, ರಾಮಯ್ಯ ಪೂಜಾರಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್ ಆಗಿದೆ.

Advertisement

Udayavani is now on Telegram. Click here to join our channel and stay updated with the latest news.

Next