Advertisement

Actor Chetan: ಕೆಂಪೇಗೌಡರ ವಿರುದ್ಧ ಅವಹೇಳನ; ನಟ ಚೇತನ್‌ ಮೇಲೆ ಎನ್‌ಸಿಆರ್‌ ದಾಖಲು

11:32 AM Dec 18, 2023 | Team Udayavani |

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಆರೋಪದ ಮೇಲೆ ನಟ ಚೇತನ್‌ ವಿರುದ್ಧ ವಕೀಲ ಆರ್‌.ಎಲ್‌.ಎನ್‌.ಮೂರ್ತಿ ಎಂಬುವರು ಶೇಷಾದ್ರಿಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisement

ದೂರು ಸ್ವೀಕರಿಸಿರುವ ಪೊಲೀಸರು ಚೇತನ್‌ ವಿರುದ್ಧ ಗಂಭೀರ ಸ್ವರೂಪವಲ್ಲದ ಪ್ರಕರಣ(ಎನ್‌ ಸಿಆರ್‌) ದಾಖಲಿಸಿದ್ದಾರೆ. ನಟ ಚೇತನ್‌ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ “ಕೆಂಪೇಗೌಡ-ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್‌ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್‌-ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ. ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರದೃಷ್ಟವಶಾತ್‌, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ’ ಎಂದು ಪೋಸ್ಟ್‌ ಮಾಡಿದ್ದರು. ಈ ಪೋಸ್ಟ್‌ನಿಂದ ನಾಡಪ್ರಭು ಕೆಂಪೇಗೌಡರಿಗೆ ಅಗೌರವ ತೋರಿದ್ದಾರೆ.

ಈ ಬಗ್ಗೆ ಕಾನೂನು ಕ್ರಮಕೈಗೊಳ್ಳುವಂತೆ ಮೂರ್ತಿ ದೂರು ನೀಡಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next