Advertisement

ಕೋವಿಡ್ ನಿಯಮ ಗಾಳಿಗೆ ತೂರಿದ ಜೋಗ ಜಲಪಾತದ ಏಳು ಮಂದಿ ಸಿಬ್ಬಂದಿಯ ವಿರುದ್ಧ ಪ್ರಕರಣ ದಾಖಲು

09:03 AM Aug 21, 2021 | Team Udayavani |

ಶಿವಮೊಗ್ಗ: ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಜೋಗ ಜಲಪಾತದ ಅಧಿಕಾರಿಗಳು, ಸಿಬ್ಬಂದಿಯ ಮೇಲೆ ಪೊಲೀಸರ ವಿಶೇಷ ತಂಡ ದಾಳಿ ನಡೆಸಿದೆ.  ಕೋವಿಡ್ ನಿಯಮ ಉಲ್ಲಂಘಿಸಿ ಪ್ರವಾಸಿಗರನ್ನು ಜಲಪಾತ ವೀಕ್ಷಣೆಗೆ ಬಿಟ್ಟ ಆರೋಪದಡಿ ಏಳು ಮಂದಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಈ ಪೈಕಿ ಮೂವರು ಹೋಂ ಗಾರ್ಡ್ ಸಿಬ್ಬಂದಿಗಳಿದ್ದಾರೆ.

Advertisement

ಜೋಗ ಜಲಪಾತ ವೀಕ್ಷಣೆಗೆ ಬರುವವರಿಗೆ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಅಥವಾ ಎರಡನೇ ಡೋಸ್ ಲಸಿಕೆ ಪಡೆದ ವರದಿ ಕಡ್ಡಾಯಗೊಳಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಆದರೆ ಇಲ್ಲಿನ ಸೆಕ್ಯೂರಿಟಿ ಗಾರ್ಡ್ ಗಳು ಈ ಆದೇಶಕ್ಕೆ ಕ್ಯಾರೆ ಅನ್ನದೆ, ಬಂದ ಪ್ರವಾಸಿಗರನ್ನು ಒಳಬಿಡುತ್ತಿದ್ದರು.

ದಿಢೀರ್ ದಾಳಿ ನಡೆಸಿದ ಅಧಿಕಾರಿಗಳು

ಜೋಗ ಗೇಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಗಳ ನಿರ್ಲಕ್ಷ್ಯದ ಕುರಿತು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರಿಗೆ ದೂರು ಬಂದಿತ್ತು. ಈ ಹಿನ್ನಲೆಯಲ್ಲಿ ಪರಿಶೀಲನೆ ನಡೆಸುವಂತೆ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ಸೂಚನೆ ನೀಡಿದ್ದರು. ಅದರಂತೆ ಸಾಗರ ಡಿವೈಎಸ್ ಪಿ ಅವರು ವಿಶೇಷ ತಂಡ ರಚಿಸಿ, ದಾಳಿಗೆ ಸೂಚಿಸಿದ್ದರು. ಪ್ರವಾಸಿಗರ ರೂಪದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ನಂಬಿದ ದೇವರೇ ನನ್ನನ್ನು ಸರಿಯಾದ ಸಮಯಕ್ಕೆ ಊರಿಗೆ ಕಳುಹಿಸಿದ್ದಾರೆ : ಮಲ್ಪೆಯ ಜಾನ್‌ ಜತ್ತನ್‌

Advertisement

ಪ್ರವಾಸಿಗರಂತೆ ಒಳಗೆ ಹೋದರು

ಪೊಲೀಸರ ವಿಶೇಷ ತಂಡ ಪ್ರವಾಸಿಗರಂತೆ ಜೋಗ ಜಲಪಾತಕ್ಕೆ ತೆರಳಿದ್ದರು. ಇವರಿಗೆ ಕೋವಿಡ್ ನೆಗೆಟಿವ್ ವರದಿಯಾಗಲಿ, ಲಸಿಕೆ ಪಡೆದ ರಿಪೋರ್ಟಾಗಲಿ ವಿಚಾರಿಸಲಿಲ್ಲ. ನೇರವಾಗಿ ಜೋಗ ಜಲಪಾತ ವೀಕ್ಷಣೆಗೆ ಕಳುಹಿಸಲಾಗಿತ್ತು. ಹಾಗಾಗಿ ಕೂಡಲೇ ಸೆಕ್ಯೂರಿಟಿ ಗಾರ್ಡ್ ಮತ್ತು ಅಂಗಡಿ ಮಾಲೀಕರೊಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ.

ಯಾರ ವಿರುದ್ಧ ಪ್ರಕರಣ?

ಜೋಗದ ಸೆಕ್ಯೂರಿಟಿಗೆ ನಿಯೋಜನೆಗೊಂಡಿದ್ದ ಸಿಬ್ಬಂದಿಗಳು, ಗೈಡ್ ಒಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಚಂದ್ರಶೇಖರ್, ಹೋಂ ಗಾರ್ಡ್ ಗಳಾದ ಮಂಜುನಾಥ, ಕೃಷ್ಣಪ್ಪ, ಮಂಜುನಾಥ, ಸೆಕ್ಯೂರಿಟಿ ಗಾರ್ಡ್ ಗಳಾದ ರಾಕೇಶ, ಪ್ರಭುದಾಸ, ಅಂಗಡಿ ಮಾಲೀಕ ಸಂಜು ಅಲಿಯಾಸ್ ಮಂಜುನಾಥ್ ಎಂಬುವವರ ವಿರುದ್ಧ ಜೋಗ ಪೊಲೀಸ್ ಠಾಣೆಯಲ್ಲಿ ವಿಶೇಷ ತಂಡ ಪ್ರಕರಣ ದಾಖಲು ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next