Advertisement

ಸುದೀಪ್‌ ಅಭಿಮಾನಿ ಸಂಘದ ರಾಜ್ಯಾಧ್ಯಕ್ಷರ ವಿರುದ್ಧ  ಪ್ರಕರಣ

12:40 AM Jan 20, 2019 | Team Udayavani |

ಚಿಕ್ಕಮಗಳೂರು: ಬಾಡಿಗೆ ಹಣ ಪಾವತಿ ವಿಚಾರವಾಗಿ ನಟ ಸುದೀಪ್‌ ವಿರುದ್ಧ  ದಾಖಲಿಸಿರುವ ದೂರು ಹಿಂಪಡೆಯುವಂತೆ ಕೊಲೆ ಬೆದರಿಕೆವೊಡ್ಡಿದ್ದ ಕಿಚ್ಚ ಸುದೀಪ್‌ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ನವೀನ್‌ ಹಾಗೂ ಸಂಜಯ್‌ವಿರುದ್ಧ ಪ್ರಕರಣ ದಾಖಲಾಗಿದೆ. ತಾಲೂಕಿನ ಬೈಗೂರು ಗ್ರಾಮದ ದೀಪಕ್‌ ಮಯೂರ್‌ ಎಂಬುವವರು ವಾರಸ್ದಾರ ಧಾರಾವಾಹಿಯ ಚಿತ್ರೀಕರಣದ ಬಾಡಿಗೆ ಹಣ ಬಾಕಿ ಸಂಬಂಧ ನಟ ಸುದೀಪ್‌ ವಿರುದಟಛಿ ಪ್ರಕರಣ ದಾಖಲಿಸಿದ್ದರು. ಇದನ್ನು ಹಿಂಪಡೆಯುವಂತೆ ಒತ್ತಾಯಿಸಿ ನವೀನ್‌, ದೀಪಕ್‌ಗೆ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿ 3 ದಿನಗಳ ಹಿಂದೆ ಮಲ್ಲಂದೂರು ಠಾಣೆಯಲ್ಲಿ ದೂರು ಸಲ್ಲಿಸಲಾಗಿತ್ತು.

Advertisement

ಪೊಲೀಸರು ನವೀನ್‌ರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದರು. ವಿಚಾರಣೆ ನಂತರ ಮಲ್ಲಂದೂರು ಠಾಣಾ ಪೊಲೀಸರು ಪ್ರಕರಣದ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ನ್ಯಾಯಾಧೀಶರು ಪ್ರಕರಣ ದಾಖಲಿಸಿ ಕೂಲಂಕಷ ತನಿಖೆ ನಡೆಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಕೊಲೆ ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next