Advertisement

ಕಾಲೇಜು ಕಿಡಿಗೇಡಿ ವಿರುದ್ಧ ಕೇಸು

11:07 AM Jul 17, 2018 | Team Udayavani |

ಬೆಂಗಳೂರು: ಆರ್‌ಟಿಐ ಕಾರ್ಯಕರ್ತ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ಅವರು ಪೊಲೀಸರಿಗೆ ಸೂಚಿಸಿದ್ದಾರೆ.

Advertisement

ಕಾಲೇಜು ಆಡಳಿತ ಹಾಗೂ ವಿದ್ಯಾರ್ಥಿನಿಯರು ದೂರು ನೀಡಿದ ಹಿನ್ನೆಲೆಯಲ್ಲಿ ಸೋಮವಾರ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿ, ವಿದ್ಯಾರ್ಥಿನಿಯರ ಅಹವಾಲು ಆಲಿಸಿದರು. ನವೀನ್‌ ಕುಮಾರ್‌ ಎಂಬ ವ್ಯಕ್ತಿ ಕಾಲೇಜು ಕ್ಯಾಂಟೀನ್‌ ಮಾಲೀಕನ ಸ್ನೇಹಿತ ಎಂದು ಕಾಂಟೀನ್‌ ಪಕ್ಕದಲ್ಲಿಯೇ ಕಳೆದ ಎರಡು ವರ್ಷಗಳಿಂದ ಅಕ್ರಮವಾಗಿ ಮನೆ ಮಾಡಿಕೊಂಡು ವಾಸವಿದ್ದಾನೆ. ಪ್ರತಿ ನಿತ್ಯ ಕಾಲೇಜು ತುಂಬಾ ಓಡಾಡುವುದು, ವಿದ್ಯಾರ್ಥಿನಿಯರ ಜತೆ ಅಸಭ್ಯವಾಗಿ ವರ್ತಿಸುವ ಜತೆಗೆ ಕಾಲೇಜಿನ ಪ್ರಾಂಶುಪಾಲರಿಗೆ ಆಡಳಿತಕ್ಕೆ ಸಂಬಂಧಿಸಿದ ವಿಚಾರಗಳನ್ನು ಕೇಳಿ ಬೆದರಿಕೆ ಹಾಕುತ್ತಿದ್ದಾನೆ. ಈ ವಿಚಾರವಾಗಿ ಪೊಲೀಸರಿಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿನಿಯರು ಮಹಿಳಾ ಆಯೋಗ ಅಧ್ಯಕ್ಷರಿಗೆ ತಿಳಿಸಿದರು.

ನವೀನ್‌ಕುಮಾರನ ಕೃತ್ಯಗಳು ಕಾಲೇಜಿನ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಹೀಗಾಗಿ ಕೂಡಲೇ ಆತನ
ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯೋಗದ ಅಧ್ಯಕ್ಷರು ಪೊಲೀಸರಿಗೆ ಸೂಚಿಸಿದ್ದು, ಈ ಸಂಬಂಧ ಹೈಗ್ರೌಂಡ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next