Advertisement

ರಾಮದಾಸ್‌ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಸೂಚನೆ

08:40 PM Aug 08, 2021 | Team Udayavani |

ಮೈಸೂರು: ಶಾಸಕ ಎಸ್‌.ಎ.ರಾಮದಾಸ್‌ ಅವ ರಿಗೆ 25 ವರ್ಷಗಳ ಹಿಂದಿನ ಭೂ ಹಗರಣ ಸಂಕಷ್ಟ ತಂದೊಡ್ಡಿದೆ. ನಗರ ವ್ಯಾಪ್ತಿಯ ಮಳಲವಾಡಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿದೆ.

Advertisement

2008ರಲ್ಲಿ ಭೂ ಹಗರಣ ಸಂಬಂಧ ಶಾಸಕ ರಾಮದಾಸ್‌ ವಿರುದ್ಧ ಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ 2019ರಲ್ಲಿ ಕ್ರಿಮಿನಲ್‌ ಕೇಸ್‌ ದಾಖಲಿಸಲು ವಿಶೇಷ ಕೋರ್ಟ್‌ ಆದೇಶಿಸಿತ್ತು.

ಇದನ್ನೂ ಓದಿ:ಜಡ್ಜ್ ಗಳ ಅವಹೇಳನ: ಸಿಬಿಐನಿಂದ ಐವರ ಬಂಧನ

ಆದರೆ, ವಿಶೇಷ ಕೋರ್ಟ್‌ನ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಮತ್ತೆ ವಿಚಾರಣೆ ಮುಂದುವರಿಸಿದ ವಿಶೇಷ ಕೋರ್ಟ್‌ ಶಾಸಕ ರಾಮದಾಸ್‌ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಸೂಚಿಸಿದೆ. 1994ರಲ್ಲಿ ಅಂದಿನ ಮೈಸೂರು ಡೀಸಿಯಾಗಿದ್ದ ತ.ಮ.ವಿಜಯಭಾಸ್ಕರ್‌ ಅವರು ಭೂ ಹಗರಣದ ಬಗ್ಗೆ ತನಿಖೆ ನಡೆಸಿ ರಾಮದಾಸ್‌ ವಿರುದ್ಧ ವರದಿ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next