Advertisement

ಯಡಿಯೂರಪ್ಪ ವಿರುದ್ಧದ ಆಡಿಯೋ ಪ್ರಕರಣ ವಿಚಾರಣೆ ಮುಂದೂಡಿಕೆ

09:42 AM Sep 18, 2019 | keerthan |

ಕಲಬುರಗಿ : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧದ ಆಡಿಯೋ ಪ್ರಕರಣಕ್ಕೆ ತಡೆಯಾಜ್ಞೆ ತೆರವುಗೊಳಿಸಲು ಕೋರಿ ಜೆಡಿಎಸ್ ಮುಖಂಡ ಶರಣಗೌಡ ಪಾಟೀಲ್ ಕಂದಕೂರ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಲಾಗಿದೆ.

Advertisement

ಶರಣಗೌಡ ಪಾಟೀಲ್ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಸೆ.26 ಕ್ಕೆ ಕಲಬುರಗಿ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಮುಂದೂಡಿದರು.

ಆಪರೇಷನ್ ಕಮಲದ ಬಗ್ಗೆ ಶರಣಗೌಡ ಕಂದಕೂರ್ ಆಡಿಯೋ ಒಂದನ್ನು ಹೊರಹಾಕಿದ್ದರು. ಈ ಬಗ್ಗೆ ರಾಯಚೂರು ಜಿಲ್ಲೆಯ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು.

ಪ್ರಕರಣದ ತನಿಖೆಗೆ ಯಡಿಯೂರಪ್ಪ ಪರ ವಕೀಲರು ಮಧ್ಯಂತರ ತಡೆಯಾಜ್ಞೆ ಪಡೆದಿದ್ದರು. ಈ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next