Advertisement

ಕೇಸ್‌ ವಾಪಸ್‌ ಪಡೆಯಲ್ಲ, ಕಾಂಗ್ರೆಸ್‌ ಸೇರಲ್ಲ: ತುರ್ವಿಹಾಳ

10:43 PM Nov 27, 2019 | Lakshmi GovindaRaj |

ಸಿಂಧನೂರು: ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ ಹಿಂಬಾಲಕರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಮನನೊಂದು ಕಾಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀ ನಾಮೆ ನೀಡಿದ್ದೇನೆ ಎಂದು ಬಿಜೆಪಿ ಮುಖಂಡ ಆರ್‌. ಬಸನ ಗೌಡ ತುರ್ವಿಹಾಳ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, “ಅನರ್ಹ ಶಾಸ ಪ್ರತಾಪಗೌಡ ಪಾಟೀಲ ಹಿಂಬಾಲಕರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ.

Advertisement

ನಾನು ಒಳಒಪ್ಪಂದ ಮಾಡಿಕೊಂಡಿದ್ದೇನೆ. ಕೋರ್ಟ್‌ನಲ್ಲಿ ಹಾಕಿರುವ ಕೇಸ್‌ ವಾಪಸ್‌ ಪಡೆಯುತ್ತೇನೆ ಎಂದು ಹೇಳುತ್ತಿದ್ದಾರೆ. ಅದೆಲ್ಲ ಸುಳ್ಳು. ನಾನು ಒಳ ಒಪ್ಪಂದ ಮಾಡಿಕೊಂಡಿಲ್ಲ. ಕೇಸನ್ನೂ ವಾಪಸ್‌ ಪಡೆಯಲ್ಲ. ಆದರೆ ಇಂತಹ ಅಪಪ್ರಚಾರದಿಂದ ಮನನೊಂದು ಕಾಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next