Advertisement

Mangaluru: ಅನುಮಾನಾಸ್ಪದ ಸಾವು ಪ್ರಕರಣ: ಆರೋಗ್ಯ ಇಲಾಖೆಯಿಂದ ತಂಡ

11:20 PM Sep 25, 2024 | Team Udayavani |

ಮಂಗಳೂರು: ನಗರದ ಕ್ಲಿನಿಕ್‌ ಒಂದರಲ್ಲಿ ಚಿಕಿತ್ಸೆ ಪಡೆದ ಬಳಿಕ ಯುವಕನೋರ್ವ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹಿನ್ನಲೆಯಲ್ಲಿ ಬೆಂದೂರ್‌ವೆಲ್‌ನಲ್ಲಿ ಕ್ಲಿನಿಕ್‌ಗೆ ಜಿಲ್ಲಾ ಆರೋಗ್ಯ ಇಲಾಖೆಯ ತಂಡ ಬುಧವಾರ ಭೇಟಿ ನೀಡಿದೆ.

Advertisement

ಈ ಪ್ರಕರಣದ ಕುರಿತು ತನಿಖೆ ನಡೆಸಲು ಆರೋಗ್ಯ ಇಲಾಖೆಯ ನುರಿತ ತಂಡ ನೇಮಕ ಮಾಡಲಾಗಿದ್ದು, ಶೀಘ್ರದಲ್ಲೇ ತನಿಖೆ ನಡೆಸಿ, ವರದಿ ನೀಡುವಂತೆ ತಿಳಿಸ ಲಾಗಿದೆ. ಸದ್ಯಕ್ಕೆ ಆ ಕ್ಲಿನಿಕ್‌ ಅನ್ನು ಮುಚ್ಚುವಂತೆ ಆದೇಶ ನೀಡಿದ್ದೇನೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ತಿಳಿಸಿದ್ದಾರೆ.

ಎದೆಯಲ್ಲಿ ಇದ್ದಂತಹ ಮಚ್ಚೆ (ಕೆಡು) ತೆಗೆಯಲು ಬೆಂದೂರ್‌ವೆಲ್‌ನ ಕಾಸೆ¾ಟಿಕ್‌ ಸರ್ಜರಿ ಕೇಂದ್ರಕ್ಕೆ ಚಿಕಿತ್ಸೆಗೆಂದು ದಾಖಲಾಗಿದ್ದ ಉಳ್ಳಾಲ ನಿವಾಸಿ ಮಹಮ್ಮದ್‌ ಮಾಝಿನ್‌ ಅವರು ಮೃತಪಟ್ಟಿದ್ದರು. ಈ ಕುರಿತು ಕದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next