Advertisement

Cash-for-query probe: ಮಹುವಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಕೇಸು

09:46 PM Apr 02, 2024 | Team Udayavani |

ನವದೆಹಲಿ: ಪ್ರಶ್ನೆಗಾಗಿ ಲಂಚ ಪ್ರಕರಣ ಸಂಬಂಧಿಸಿದಂತೆ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ವಿರುದ್ಧ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಮಂಗಳವಾರ ಅಕ್ರಮ ಹಣವರ್ಗಾವಣೆ ಪ್ರಕರಣ ದಾಖಲಿಸಿದ್ದಾರೆ.

Advertisement

ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳುವುದಕ್ಕಾಗಿ ಮಹುವಾ ಅವರು ಉದ್ಯಮಿ ದರ್ಶನ್‌ ಹಿರಾನಂದಿನಿ ಅವರಿಂದ ಲಂಚ ಪಡೆದಿದ್ದಾರೆ ಎಂಬ ಆರೋಪದಲ್ಲಿ ಸಿಬಿಐ ಮಹುವಾ ವಿರುದ್ಧ ಎಫ್ಐಆರ್‌ ದಾಖಲಿಸಿತ್ತು.

ಇದೇ ಪ್ರಕರಣದಲ್ಲಿ ವಿದೇಶಿ ವಿನಿಯಮ ಕಾಯ್ದೆಯ ಉಲ್ಲಂಘನೆಗೆ ಸಂಬಂಧಿಸಿದಂತೆ ಇ.ಡಿ. ಮಹುವಾಗೆ ಸಮನ್ಸ್‌ ಜಾರಿ ಮಾಡಿದ್ದರೂ, ಮಹುವಾ ವಿಚಾರಣೆ ಹೋಗಿರಲಿಲ್ಲ. ಸಿಬಿಐ ದಾಖಲಿಸಿರುವ ಎಫ್ಐಆರ್‌ನ ಆಧಾರದ ಮೇಲೆಯೇ ಇ.ಡಿ. ಕೇಸು ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next