Advertisement

Caste Census: ಸದ್ಯ ಆದೇಶವಿಲ್ಲ: ಹೈಕೋರ್ಟ್‌

11:47 PM Mar 05, 2024 | Team Udayavani |

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಹಾಗೂ ಅದರ ವರದಿಯನ್ನು ಸರಕಾರಕ್ಕೆ ಸಲ್ಲಿಕೆಯಾಗಿರುವ ಕುರಿತು ಸಲ್ಲಿಕೆಯಾಗಿರುವ ಎಲ್ಲ ಅರ್ಜಿಗಳಿಗೆ ಸಂಬಧಿಸಿದಂತೆ ವಿಸ್ತೃತ ವಿಚಾರಣೆ ನಡೆಸಬೇಕಾದ ಅಗತ್ಯವಿದ್ದು ಅಲ್ಲಿವರೆಗೆ ಯಾವುದೇ ಆದೇಶ ಹೊರಡಿಸುವುದಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

Advertisement

ಈ ವಿಚಾರವಾಗಿ ಡಾ| ಮುಖ್ಯ ಮಂತ್ರಿ ಚಂದ್ರು ಅವರು 2021ರಲ್ಲಿ, ಶಿವರಾಜ್‌ ಕಣಶೆಟ್ಟಿ, ಭುಜೇಂದ್ರ ಹಾಗೂ ಇತರರು 2015ರಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ| ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿದ್ದವು.

ವಿಚಾರಣೆ ವೇಳೆ ರಾಜ್ಯ ಸರಕಾರದ ಪರ ಹಾಜರಾಗಿದ್ದ ಅಡ್ವೋಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ, ಹಿಂದುಳಿದ ವರ್ಗಗಳ ಆಯೋಗದಿಂದ ವರದಿಯನ್ನು ಫೆ. 29ಕ್ಕೆ ಸರಕಾರ ಸ್ವೀಕರಿಸಿದೆ. ಈ ವರದಿ ಕುರಿತಂತೆ ಸರಕಾರ ಇನ್ನೂ ನಿರ್ಧಾರಕ್ಕೆ ಬರಬೇಕಾಗಿದೆ ಎಂದು ಪ್ರಮಾಣ ಪತ್ರದ ಮೂಲಕ ತಿಳಿಸಿದರು. ಅದಕ್ಕೆ, ಇದೇ ವಿಚಾರವಾಗಿ ಸಲ್ಲಿಕೆಯಾಗಿರುವ ಇತರ ಅರ್ಜಿಗಳ ಸಂಬಂಧ ರಾಜ್ಯ ಸರ್ಕಾರ ಪ್ರತಿಕ್ರಿಯೆ ನೀಡಬೇಕಾಗಿದೆ ಎಂದು ನ್ಯಾಯಪೀಠ ಹೇಳಿತು.

ಅದಕ್ಕಾಗಿ ಅಡ್ವೋಕೇಟ್‌ ಜನರಲ್‌ ಒಂದು ವಾರದ ಕಾಲಾವಕಾಶ ಕೋರಿದರು.ಈ ವಿಚಾರವಾಗಿ ಸಲ್ಲಿಕೆಯಾಗಿರುವ ಎಲ್ಲ ಅರ್ಜಿಗಳ ಬಗ್ಗೆ ವಿಸ್ತೃತ ವಿಚಾರಣೆ ನಡೆಸುವ ಅಗತ್ಯವಿದೆ. ಹಾಗಾಗಿ, ತಕ್ಷಣಕ್ಕೆ ಯಾವುದೇ ಆದೇಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ ನ್ಯಾಯಪೀಠ ವಿಚಾರಣೆಯನ್ನು ಮಾ.21ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next