Advertisement

Caste Census;ಲಿಂಗಾಯತರ ವಿರೋಧ :ವೀರಶೈವ ಮಹಾಸಭಾದ ಸಭೆಯಲ್ಲಿ  ನಿರ್ಣಯ

12:54 AM Nov 10, 2023 | Team Udayavani |

ಬೆಂಗಳೂರು: ಜಾತಿಗಣತಿ ಬಗ್ಗೆ ಕಾಂತರಾಜು ಸಮಿತಿ ತಯಾರಿಸಿರುವ ವರದಿ ಬಗ್ಗೆ ಒಕ್ಕಲಿಗ ಸಮುದಾಯದ ಶ್ರೀಗಳು, ನಾಯಕರು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ರಾಜ್ಯದ ಮತ್ತೂಂದು ಪ್ರಬಲ ಲಿಂಗಾಯತ ಸಮುದಾಯವೂ ಆಕ್ಷೇಪ ವ್ಯಕ್ತಪಡಿಸಿದೆ.

Advertisement

ಇಲ್ಲಿನ ಸದಾಶಿವ ನಗರದಲ್ಲಿರುವ ವೀರಶೈವ ಮಹಾಸಭಾದ ಕಚೇರಿಯಲ್ಲಿ ಗುರುವಾರ ನಡೆದ ಅಖೀಲಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಭೆಯಲ್ಲಿ ಜಾತಿಗಣತಿ ವಿರೋಧಿಸಿ ನಿರ್ಣಯ ತೆಗೆದುಕೊಳ್ಳಲಾಗಿದೆ.  ಅಲ್ಲದೆ, ಇದನ್ನು ಮನೆಯಲ್ಲೇ ಕುಳಿತು ತಯಾರಿಸಲಾಗಿದೆ ಎಂದು ಆರೋಪಿಸಿದೆ. ಸಭೆ ಬಳಿಕ ಮಾತನಾಡಿದ ಅಖೀಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು, ಈ ಜಾತಿಗಣತಿ ಸಮೀಕ್ಷೆಯೇ ಸಮರ್ಪಕವಾಗಿ ನಡೆದಿಲ್ಲ. ಹಲವರ ಮನೆಗಳಿಗೆ ಭೇಟಿಯನ್ನು ನೀಡದೆ ವರದಿ ಸಿದ್ಧಪಡಿಸಲಾಗಿದೆ ಎಂಬ ದೂರುಗಳು ಬಂದಿವೆ. ಈ ಸಮೀಕ್ಷೆಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನ ಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ. ಇದರಿಂದ ಸಮಾಜಕ್ಕೆ ತೀವ್ರ ಸ್ವರೂಪದ ನಷ್ಟವಾಗಲಿದೆ ಎಂದು ಆಕ್ಷೇಪಿಸಿದರು.

ವೀರಶೈವ ಲಿಂಗಾಯತ ಸಮುದಾಯದ ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸದೆ ಮನೆಯಲ್ಲಿಯೇ ಕುಳಿತು ತಯಾರಿಸಲಾಗಿದೆ ಎಂದಿರುವ ಅವರು, ಯಾವುದೇ ಶಂಕೆಗೆ ಆಸ್ಪದ ನೀಡದಂತೆ ಜಾತಿಗಣತಿ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ವೈಜ್ಞಾನಿಕವಾಗಿರಲಿ

ನಾವು ಜಾತಿ ಗಣತಿಯ ವಿರೋಧಿಗಳಲ್ಲ ಎಂದು ಹೇಳಿದ ಶಾಮನೂರು ಶಿವಶಂಕರಪ್ಪ, ಯಾವುದೇ ವರದಿ ವೈಜ್ಞಾನಿಕವಾಗಿರಬೇಕು ಎಂಬುದು ನಮ್ಮ ಒತ್ತಾಯ. 8 ವರ್ಷ ಹಳೆಯದಾಗಿರುವ ವರದಿ ಹಲವು ನ್ಯೂನತೆ ಗಳಿಂದ ಕೂಡಿದೆ. ಹೊಸದಾಗಿ ಮತ್ತು ಆಧುನಿಕ ತಂತ್ರಜ್ಞಾನವನ್ನು ಬಳಸಿ ಈ ನ್ಯೂನತೆಗಳನ್ನು ಸರಿಪಡಿಸಿ ಹೊಸದಾಗಿ ಜಾತಿ ಗಣತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Advertisement

ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸರಕಾರಕ್ಕೆ ಮೊದಲು ವರದಿ ಕೊಡಲಿ, ಮುಂದೆ ನೋಡೋಣ. ಆದರೆ ನಾವು ಪ್ರಸ್ತುತ ಇರುವ ಕಾಂತರಾಜು ಆಯೋಗದ ವರದಿಯನ್ನು ಒಪ್ಪುವುದಿಲ್ಲ. ಪ್ರತಿ ವ್ಯಕ್ತಿಯ ಆಧಾರ್‌ ಕಾರ್ಡ್‌ ಮುಂದಿಟ್ಟುಕೊಂಡು ವರದಿ ಸಿದ್ಧಪಡಿಸಬೇಕು. ಸರಕಾರ ಈ ಬಗ್ಗೆ ವಿವೇಚಣೆಯಿಂದ ಮತ್ತೂಮ್ಮೆ ಪರಾಮರ್ಶೆ ಮಾಡಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. “ಈ ಬಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡುವಿರಾ’ ಎಂಬ ಪ್ರಶ್ನೆಗೆ, “ನಾವು ಯಾರೂ ಸಿಎಂ ಭೇಟಿಗೆ ಹೋಗುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next