Advertisement

ಶಿವಮೊಗ್ಗ : ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿ ಕಟ್ಟಿದ ದನ-ಕರು ಸಾವು

11:15 AM Oct 12, 2021 | Girisha |

ಶಿವಮೊಗ್ಗ ಬ್ರೇಕಿಂಗ್ : ಶಿವಮೊಗ್ಗದ ಸಾಲಿಗೆರೆಯಲ್ಲಿ ಚಿರತೆ ದಾಳಿಗೆ ದನ-ಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ದನ-ಕರು ಮೇಲೆ ಚಿರತೆ ದಾಳಿ ಮಾಡಿದೆ.

Advertisement

ಶಿವಮೊಗ್ಗ ತಾಲೂಕಿನ ಉಂಬ್ಳೇಬೈಲು ಸಮೀಪದ ಸಾಲಿಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,  ಕೊಟ್ಟಿಗೆಯಲ್ಲಿ ಕಟ್ಟಿದ್ದ ದನ- ಕರುಗಳ ಮೇಲೆ ತಡರಾತ್ರಿ ಚಿರತೆ ದಾಳಿ ಮಾಡಿದೆ. ಇನ್ನು ಸಾವನ್ನಪ್ಪಿರುವ ದನ- ಕರುಗಳು ಕೃಷ್ಣಮೂರ್ತಿ ಎಂಬುವವರಿಗೆ ಸೇರಿವೆ.

ಚಿರತೆ ದಾಳಿಯಿಂದಾಗಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಳೆದ ತಿಂಗಳಷ್ಟೇ ಕಾಡಾನೆ ದಾಳಿಯಿಂದ ಸಾಕಷ್ಟು ನಷ್ಟ ಅನುಭವಿಸಿದ್ದರು. ಉಂಬ್ಳೇಬೈಲು ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿಗೆ ಕಾಡು ಪ್ರಾಣಿಗಳ ಉಪಟಳ ಹೆಚ್ಚಳವಾಗಿದ್ದು, ಅರಣ್ಯಾಧಿಕಾರಿಳು ಈ ಕಡೆ ಗಮನ ಕೊಡಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next