Advertisement

ಜನವರಿ 18ರಿಂದ ಗೋಹತ್ಯೆ ನಿಷೇಧ

12:38 AM Jan 17, 2021 | Team Udayavani |

ಬೆಂಗಳೂರು: ರಾಜ್ಯ ಸರಕಾರ ತಿದ್ದುಪಡಿ ಮಾಡಿರುವ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಅಧ್ಯಾದೇಶ (ಗೋಹತ್ಯೆ ನಿಷೇಧ)ಗೆ ಅಧಿಕೃತ ರಾಜ್ಯಪತ್ರ ಹೊರಡಿಸಲಾಗಿದ್ದು, ಜ. 18ರಿಂದ ತಿದ್ದುಪಡಿ ಕಾಯ್ದೆ ಜಾರಿಗೆ ಬರಲಿದೆ.

Advertisement

ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಗೆ ರಾಜ್ಯ ಸರಕಾರವು ಕಳೆದ ಅಧಿವೇಶನದ ಸಂದರ್ಭ ರಾಜ್ಯ ವಿಧಾನ ಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿತ್ತು. ವಿಧಾನ ಪರಿಷತ್ತಿನಲ್ಲಿ ಈ ಮಸೂದೆಗೆ ಮಂಡನೆಗೆ ಸರಕಾರ ಮುಂದಾಗಿದ್ದರೂ ಪರಿಷತ್‌ ಸಭಾಪತಿ ಪದಚ್ಯುತಗೊಳಿಸುವ ನಿರ್ಣಯ ಮಂಡನೆ ಕುರಿತು ಗಲಾಟೆಯಾಗಿದ್ದರಿಂದ ಪರಿಷತ್ತಿನಲ್ಲಿ ಮಸೂದೆ ಮಂಡನೆಯಾಗಿರಲಿಲ್ಲ. ಹೀಗಾಗಿ ರಾಜ್ಯ ಸರಕಾರ ಅಧ್ಯಾದೇಶ ಹೊರಡಿಸಿತ್ತು. ರಾಜ್ಯಪಾಲರು ರಾಜ್ಯ ಸರಕಾರದ ತಿದ್ದುಪಡಿ ಅಧ್ಯಾದೇಶಕ್ಕೆ ಅಂಕಿತ ಹಾಕಿದ್ದರು. ಈ ಹಿನ್ನೆಲೆಯಲ್ಲಿ ನೂತನ ಕಾಯ್ದೆ ಜಾರಿಗೆ ಅಧಿಕೃತ ಆದೇಶ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next