Advertisement

Cauvery ಕಿಚ್ಚು: ರೈತರಿಂದ ಮತ್ತೊಂದು ವಿನೂತನ ಪ್ರತಿಭಟನೆ

06:52 PM Sep 07, 2023 | Team Udayavani |

ಶ್ರೀರಂಗಪಟ್ಟಣ: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ಗುರುವಾರ ಭೂಮಿತಾಯಿ ಹೋರಾಟ ಸಮಿತಿ ಪದಾಧಿಕಾರಿಗಳು ಒಣಗಿದ ಕಬ್ಬಿನ ಜೊಲ್ಲೆ ಹಿಡಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

Advertisement

ರೈತ ಹೋರಾಟಗಾರ ಕೆ.ಎಸ್.ನಂಜುಂಡೇಗೌಡ ನೇತೃತ್ವದಲ್ಲಿ ಒಣಗಿದ ಕಬ್ಬು ಹಿಡಿದು ತಾಲೂಕು ಕಚೇರಿ ಮುಂದೆ ತಮಿಳುನಾಡಿಗೆ ನೀರು ಬಿಟ್ಟ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹೋರಾಟಕ್ಕೆ ವಕೀಲರ ಸಂಘ ಸಾಥ್

ವಕೀಲರ ಸಂಘದ ಅಧ್ಯಕ್ಷ ಸತ್ಯನಾರಾಯಣ,ಕಾರ್ಯದರ್ಶಿ ಚಂದ್ರೇಗೌಡ ಹಾಗೂ ಖಜಾಂಚಿ ವಿನಯ್ ಸೇರಿ ಇತರ ಪದಾಧಿಕಾರಿ ಹಾಗೂ ಸದಸ್ಯರ ನೇತೃತ್ವದಲ್ಲಿ ಕಾವೇರಿ ಹೋರಾಟ ಬೆಂಬಲಿಸಿ ಶ್ರೀರಂಗಪಟ್ಟಣ ದಲ್ಲಿ ವಕೀಲರ ಪ್ರತಿಭಟನೆ ಮಾಡಿ ನೀರು ಬಿಟ್ಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

Advertisement

ಕಲಾಪ ಬಹಿಷ್ಕರಿಸಿ ನ್ಯಾಯಾಲಯದಿಂದ ತಾಲೂಕು ಕಚೇರಿವರೆ ಮೆರವಣಿಗೆ ನಡೆಸಿದ ಮಾಡಿ ವಕೀಲರು ಅಂಬೇಡ್ಕರ್ ವೃತ್ತದಲ್ಲಿ ಪ್ರತಿಮೆ ಸುತತಲೂ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು ತತ್ ಕ್ಷಣವೇ ತಮಿಳುನಾಡಿಗೆ ನೀರು ನಿಲ್ಲಿಸುವಂತೆ ವಕೀಲರ ಒತ್ತಾಯಮಾಡಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ವಕೀಲರಿಂದ ಮನವಿ ಸಲ್ಲಿಕೆ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next