ಬೆಂಗಳೂರು: ಕಾವೇರಿ ಹೋರಾಟದ ಅಂಗವಾಗಿ ಅಕ್ಟೋಬರ್ 5 ರಂದು ಕೆಆರ್ ಎಸ್ ಮುತ್ತಿಗೆ ಹಾಕುವಂತೆ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಕರೆ ನೀಡಿದರು.
ಕರ್ನಾಟಕ ಬಂದ್ ಪ್ರಯುಕ್ತ ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಸರ್ಕಾರ ಪೊಲೀಸರ ಮೂಲಕ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಿದೆ. ಇದಕ್ಕೆ ಕನ್ನಡ ಹೋರಾಟಗಾರರು ಬಗ್ಗುವುದಿಲ್ಲ ಎಂದರು.
ಅಕ್ಟೋಬರ್ 5 ರಂದು ಮೈಸೂರ್ ಬ್ಯಾಂಕ್ ವೃತ್ತದಿಂದ ಕೆಆರ್ ಎಸ್ ವರೆಗೂ ಬೈಕ್ ರ್ಯಾಲಿ ನಡೆಸಲಾಗುವುದು. ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.
ಇದನ್ನೂ ಓದಿ:Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ ಜಿಲ್ಲೆಗೆ ಯೆಲ್ಲೊ ಅಲರ್ಟ್; ಭಾರಿ ಮಳೆ ಸಾಧ್ಯತೆ
ಗೃಹ ಸಚಿವ ಪರಮೇಶ್ವರ ವಿರುದ್ದ ಆಕ್ರೋಶ ಹೊರಹಾಕಿದ ವಾಟಾಳ್ ನಾಗರಾಜ್, ಪೊಲೀಸ್ ಇಲಾಖೆಯನ್ನು ಸರ್ಕಾರ ದುರುಪಯೋಗ ಮಾಡಿಕೊಂಡಿದೆ. ಪದೇ ಪದೇ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಿದರೆ ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಸಿದರು.