Advertisement

ಕಾವೇರಿ ತೀರ್ಪು: ಇಂದು ಜನಪ್ರತಿನಿಧಿಗಳ ಸಭೆ

06:05 AM Mar 08, 2018 | Team Udayavani |

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಮಾಡಿ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪಿನ ಸಾಧಕ ಬಾಧಕ ಕುರಿತು ಚರ್ಚಿಸಲು ಗುರುವಾರ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆ ನಡೆಯಲಿದೆ. 

Advertisement

ಈ ಸಭೆಯಲ್ಲಿ ಪಾಲ್ಗೊಳ್ಳಲು ಕಾವೇರಿ ಕಣಿವೆಯ ಶಾಸಕರು ಹಾಗೂ ಸಂಸದರಿಗೂ ಆಹ್ವಾನ ನೀಡಲಾಗಿದೆ. ಸಂಜೆ 4 ಗಂಟೆಗೆ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಜಲಸಂಪನ್ಮೂಲ ಸಚಿವರು, ಕಾನೂನು ಸಚಿವರು, ಅಡ್ವೊಕೇಟ್‌ ಜನರಲ್‌ ಮಧುಸೂಧನ ನಾಯಕ್‌ ಸೇರಿದಂತೆ ಕಾನೂನು ತಜ್ಞರು ಪಾಲ್ಗೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next