Advertisement

ಶುಭ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವ; ತಲಕಾವೇರಿ ಜಾತ್ರೆ

07:01 PM Oct 17, 2018 | Sharanya Alva |

ಮಡಿಕೇರಿ:ಕೊಡಗು ಜಿಲ್ಲೆ ಮಡಿಕೇರಿಯ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಬುಧವಾರ ಮೇಷ ಲಗ್ನ ಮುಹೂರ್ತವಾದ 6.45ಕ್ಕೆ ತೀರ್ಥೋದ್ಭವವಾಗಿದ್ದು, ಸಾವಿರಾರು ಭಕ್ತರು ಕಾವೇರಿ ದರ್ಶನ ಪಡೆದರು.

Advertisement

ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ಉದ್ಭವಿಸಿದ್ದು, ಸಾವಿರಾರು ಮಂದಿ ಸಾಕ್ಷಿಯಾದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡಾ ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಕೊಂಡರು.

ರಾಜ್ಯದ ವಿವಿಧೆಡೆಯಿಂದ ಆಗಮಿಸಿದ ಭಕ್ತರು ಪವಿತ್ರ ನದಿಗಳಲ್ಲಿ ಒಂದಾದ ಕಾವೇರಿಯಲ್ಲಿ ಸ್ನಾನ ಮಾಡಿದರು. ತಲಕಾವೇರಿ ಹಾಗೂ ಭಾಗಮಂಡಲ ಪ್ರದೇಶದಲ್ಲಿ ಭಕ್ತರಿಗಾಗಿ ವಿಶೇಷ ಸಿದ್ಧತೆ ಮಾಡಲಾಗಿತ್ತು. ಭದ್ರತೆಯ ಹಿತದೃಷ್ಟಿಯಿಂದ ಬ್ಯಾರಿಕೇಡ್ ಹಾಗೂ ಸುಮಾರು 500ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿತ್ತು

Advertisement

Udayavani is now on Telegram. Click here to join our channel and stay updated with the latest news.

Next