Advertisement

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇಂದು

10:46 PM Jun 24, 2019 | Team Udayavani |

ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಮಂಗಳವಾರ ದೆಹಲಿಯಲ್ಲಿ ನಡೆಯಲಿದೆ. ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಮಸೂದ್‌ ಹುಸೇನ್‌ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿ ಹಾಗೂ ಕೇಂದ್ರ ಸರ್ಕಾರದ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

Advertisement

ಜೂನ್‌ ತಿಂಗಳಲ್ಲಿ ಕರ್ನಾಟಕ 9.19 ಟಿಎಂಸಿ ನೀರು ಬಿಡಬೇಕಿತ್ತು. ಬಿಳಿಗುಂಡ್ಲು ಮೂಲಕ 1.72 ಟಿಎಂಸಿ ನೀರು ಬಿಡಲಾಗಿದೆ. ಬಾಕಿ 7.47 ಟಿಎಂಸಿ ನೀರು ಬಿಡಲು ಕರ್ನಾಟಕಕ್ಕೆ ಸೂಚನೆ ನೀಡಿ ಎಂದು ತಮಿಳುನಾಡು ಪ್ರಾಧಿಕಾರದ ಮುಂದೆ ಮನವಿ ಮಾಡುವ ಸಾಧ್ಯತೆಯಿದೆ.

ಆದರೆ, ಕಾವೇರಿ ಕೊಳ್ಳದಲ್ಲಿ ವಾಡಿಕೆಯಷ್ಟು ಮಳೆ ಆಗಿಲ್ಲ. ಮಳೆ ಆಗಿಲ್ಲದಿರುವುದರಿಂದ ಜಲಾಶಯಗಳಲ್ಲಿ ನೀರಿಲ್ಲ. ರಾಜ್ಯದಲ್ಲೇ ಬೆಳೆಗಳಿಗೆ ಮತ್ತು ಕುಡಿಯಲು ನೀರಿಲ್ಲ. ಹೀಗಾಗಿ, ನೀರು ಬಿಡಲು ಸಾಧ್ಯವಿಲ್ಲ. ಮುಂದೆ ಮಳೆ ಬಂದರಷ್ಟೇ ನೀರು ಬಿಡಲಾಗುವುದು ಎಂದು ವಾದ ಮಂಡಿಸಲು ಕರ್ನಾಟಕ ಮುಂದಾಗಿದೆ. ಎರಡೂ ವಾದ ಆಲಿಸಿ ಪ್ರಾಧಿಕಾರ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದು ಕಾದು ನೋಡಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next