Advertisement

Cauvery water : ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ

09:03 PM Sep 01, 2023 | Team Udayavani |

ಶ್ರೀರಂಗಪಟ್ಟಣ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ರೈತ ಸಂಘಟನೆಗಳು ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.

Advertisement

ತಾಲೂಕಿನ ಕೆಆರ್‌ಎಸ್ ಜಲಾಶಯದ ಬೃಂದಾವನ ಪ್ರವೇಶದ್ವಾರದಲ್ಲಿ ಮೈಸೂರು, ಕೊಡಗು, ಮಂಡ್ಯ ಸೇರಿದಂತೆ ಇತರೆ ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಮಂದಿ ಮೇಣದ ಬತ್ತಿ ಹಿಡಿದು ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದರು.

ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ ಕ್ಷೀಣಿಸಿದ್ದರೂ, ಕನ್ನಂಬಾಡಿ ಅಣೆಕಟ್ಟೆಯಿಂದ ನೀರು ಬಿಡುವಂತೆ ಸೂಚನೆ ನೀಡಿರುವ ಕಾವೇರಿ ನಿರ್ವಹಣಾ ಪ್ರಾಧಿಕಾರ ಹಾಗೂ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿದರು.

ಧರಣಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾಧ್ಯಕ್ಷ ಕೆಂಪುಗೌಡ, ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್.ಗೌಡ, ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಕೃಷ್ಣೇಗೌಡ, ಪಾಂಡವಪುರ ತಾಲೂಕು ಅಧ್ಯಕ್ಷ ಪಿ.ನಾಗರಾಜು, ಕಾರ್ಯದರ್ಶಿ ವಿಜಿಕುಮಾರ್, ಪಾಲಹಳ್ಳಿ ರಾಮಣ್ಣ, ಕಡತನಾಳು ಬಾಲು, ಬಲರಾಮು, ಕಟ್ಟೇರಿ ಮಹಾದೇವು ಸೇರಿದಂತೆ ವಿವಿದೆಡೆಗಳಿಂದ ನೂರಾರು ರೈತರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next