Advertisement

ವಿವೇಕಾನಂದ ರೆಡ್ಡಿ ಪ್ರಕರಣ: ಆಂಧ್ರ ಸಿಎಂ ಜಗನ್ ಸಂಬಂಧಿ ವೈಎಸ್ ಭಾಸ್ಕರ ರೆಡ್ಡಿ ಬಂಧನ

10:59 AM Apr 16, 2023 | Team Udayavani |

ಹೈದರಾಬಾದ್: ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ಮೋಹನ ರೆಡ್ಡಿ ಅವರ ಸಂಬಂಧಿ ವೈಎಸ್ ಭಾಸ್ಕರ ರೆಡ್ಡಿ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಮಾಜಿ ಸಂಸದ ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣದಲ್ಲಿ ಭಾಸ್ಕರ ರೆಡ್ಡಿ ಬಂಧನವಾಗಿದೆ.

Advertisement

ವಿವೇಕಾನಂದ ರೆಡ್ಡಿ ಅವರು ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಸಹೋದರನಾಗಿದ್ದಾರೆ. 2019ರ ಮಾರ್ಚ್ 15ರಂದು ಅವರು ತಮ್ಮ ಪುಲಿವೆಂಡುಲಾದ ನಿವಾಸದಲ್ಲಿ ಹತ್ಯೆಯಾಗಿದ್ದರು.

ಈ ಪ್ರಕರಣದ ತನಿಖೆಯನ್ನು ಮೊದಲು ರಾಜ್ಯ ಪೊಲೀಸ್ ಘಟಕದ ವಿಶೇಷ ತನಿಖಾ ತಂಡ ನಡೆಸಿತ್ತು. ಆದರೆ 2020ರಲ್ಲಿ ಇದರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು.

ಸಿಬಿಐ ಚಾರ್ಜ್ ಶೀಟ್ ಪ್ರಕಾರ, ವಿವೇಕಾನಂದ ರೆಡ್ಡಿ ಅವರು ಕಡಪಾ ಲೋಕಸಭೆ ಕ್ಷೇತ್ರದಿಂದ ಅವಿನಾಶ್ ರೆಡ್ಡಿ ಬದಲಿಗೆ ತನಗೆ ಅಥವಾ ವೈಎಸ್ ಶರ್ಮಿಳಾ (ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ) ಅಥವಾ ವೈಎಸ್ ವಿಜಯಮ್ಮ (ಜಗನ್ ಮೋಹನ್ ರೆಡ್ಡಿ ಅವರ ತಾಯಿ) ಅವರಿಗೆ ಸಂಸದೀಯ ಚುನಾವಣೆ ಟಿಕೆಟ್ ಬಯಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next