Advertisement

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

12:32 AM Sep 17, 2024 | Team Udayavani |

ಹೊಸದಿಲ್ಲಿ: ಪಂಜರದ ಗಿಳಿ ಎಂಬ ಆಪಾದನೆಯಿಂದ ಸಿಬಿಐ ಮುಕ್ತ ಆಗಬೇಕೆಂಬ ಸುಪ್ರೀಂ ಕೋರ್ಟ್‌ನ ಅಭಿಪ್ರಾಯಕ್ಕೆ ತಿರುಗೇಟು ನೀಡಿರುವ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌, ತನಿಖಾ ಸಂಸ್ಥೆಗಳು ಬಿಗುವಿನ ಸ್ಥಿತಿಯಲ್ಲಿ ಕಾರ್ಯನಿರ್ವ ಹಿಸುತ್ತವೆ. ಸುಪ್ರೀಂ ಅಭಿ ಪ್ರಾಯ ಅವುಗಳ ಕೆಲಸಕ್ಕೆ ಪ್ರೇರಣೆ ಒದಗಿಸುವುದಿಲ್ಲ ಎಂದು ಹೇಳಿದ್ದಾರೆ. ಮುಂಬಯಿಯ ಕಾರ್ಯಕ್ರಮ ವೊಂದರಲ್ಲಿ ಮಾತನಾಡಿದ ಅವರು, ಸಂವಿಧಾನಬದ್ಧ ಸಂಸ್ಥೆಗಳು ಸ್ವತಂತ್ರವಾಗಿ, ನೆಲದ ಕಾನೂನು ರೀತ್ಯ ಕಾರ್ಯ ನಿರ್ವಹಿಸುತ್ತಿವೆ. ಹೀಗಿರುವಾಗ ನಾವು ಒಂಚೂರು ಸೆನ್ಸೇಶನ್‌ ಸೃಷ್ಟಿಸಿದರೆ ರಾಜಕೀಯ ಚರ್ಚೆಗೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next