Advertisement

ಹುಬ್ಬಳ್ಳಿ ಸಿಎಆರ್ ಮೈದಾನ ಬಳಿ ಕಚೇರಿಯಲ್ಲಿ ಸಿಬಿಐ ಅಧಿಕಾರಿಗಳಿಂದ ವಿನಯ್ ಕುಲಕರ್ಣಿ ವಿಚಾರಣೆ

04:30 PM Nov 08, 2020 | keerthan |

ಹುಬ್ಬಳ್ಳಿ: ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು,ಶನಿವಾರ ಹುಬ್ಬಳ್ಳಿಗೆ ಕರೆ ತಂದ ಸಿಬಿಐ ಅಧಿಕಾರಿಗಳು, ಇಲ್ಲಿನ ಹೊಸ ಸಿಎಆರ್ ಮೈದಾನ ಬಳಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ.

Advertisement

ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಧಾರವಾಡದಲ್ಲಿ ಗುರುವಾರ ಬಂಧಿಸಿದ್ದರು.

ವಿನಯ್ ಕುಲಕರ್ಣಿ ಅವರನ್ನು ನ್ಯಾಯಾಲಯವು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿದ್ದು, ಇಂದು ಬೆಳಿಗ್ಗೆ ಅಧಿಕಾರಿಗಳು ಬೆಳಗಾವಿ ಹಿಂಡಲಗಾ ಜೈಲಿನಿಂದ ವಶಕ್ಕೆ ಪಡೆದರು.

ಇದನ್ನೂ ಓದಿ:ಹುಟ್ಟುಹಬ್ಬದ ದಿನವೇ ಸಿಬಿಐ ಕಸ್ಟಡಿಗೆ ಮಾಜಿ ಸಚಿವ ವಿನಯ್ ಕುಲಕರ್ಣಿ

Advertisement

ವಿನಯ ಕುಲಕರ್ಣಿ ಅವರನ್ನು ಶನಿವಾರ ಬೆಳಿಗ್ಗೆ ಇಲ್ಲಿನ ಸಿಎಆರ್ ಮೈದಾನಕ್ಕೆ ಕರೆ ತಂದ ಆರು ಜನ ಸಿಬಿಐ ಅಧಿಕಾರಿಗಳು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next