Advertisement

Rahul ಗಾಂಧಿಗೆ ಹಣ ಹೋಗಿದ್ದಕ್ಕೆ ಸಿಬಿಐ ತನಿಖೆಗೆ ನೀಡಲು ಹಿಂದೇಟು: ಡಿವಿಎಸ್‌

10:25 PM Jun 01, 2024 | Team Udayavani |

ಬೆಂಗಳೂರು: ರಾಹುಲ್‌ ಗಾಂಧಿಗೆ ಹಣ ಕಳುಹಿಸಿದ ವಿಚಾರ ಬಹಿರಂಗವಾಗಬಹುದು ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಆರೋಪಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಟಿಗಳು ರಾಜ್ಯ ಸರಕಾರ ನೀಡುವ ಆದೇಶ ಪಾಲಿಸುವ ಏಜೆನ್ಸಿಗಳು. ಸತ್ಯಾಂಶ ಹೊರಕ್ಕೆ ಬರಲು ಸಿಬಿಐ ತನಿಖೆ ಮಾಡಿಸಿ.ಇಷ್ಟು ದೀರ್ಘ‌ ಕಾಲ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯನವರಿಗೆ ನಾಗೇಂದ್ರ ಅವರನ್ನು ವಜಾ ಮಾಡುವ ಧೈರ್ಯ ಇಲ್ಲ . ಭ್ರಷ್ಟಾಚಾರಕ್ಕೆ ಪುಷ್ಟಿ ಕೊಡುವ ದಾರಿಯಲ್ಲಿ ಸಿದ್ದರಾಮಯ್ಯ ಮುಂದೆ ಹೋಗುತ್ತಿದ್ದಾರೆ ಎಂದು ಟೀಕಿಸಿದರು.

ನಿಗಮದ ಅಧ್ಯಕ್ಷರು ಸತ್ಯ ಸಂಗತಿಯನ್ನು ಯಾಕೆ ಬಿಡುಗಡೆ ಮಾಡಿಲ್ಲ? ನಾಗೇಂದ್ರ 2 ದಿನಗಳಿಂದ ಕಾಣೆಯಾಗಿದ್ದಾರೆ. 15 ಖಾಸಗಿ ಕಂಪೆನಿಗಳಿಗೆ ಹಣ ವರ್ಗಾವಣೆ ಆಗಿದೆ. ಇದು ನೇರವಾಗಿ ಕಾಂಗ್ರೆಸ್ಸಿನ ಎಟಿಎಂಗೆ ಹೋಗುವ ಹಣವೆಂದು ಸಾಬೀತುಪಡಿಸಿದೆ. 3 ಖಾತೆಗಳು ಹೈದರಾಬಾದ್‌ ಮೂಲದವು. ಇದರ ಮೂಲಕ ತೆಲಂಗಾಣಕ್ಕೆ ಹಣದ ವ್ಯವಸ್ಥೆ ಮಾಡಿದ್ದಾರೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next