Advertisement

ಜನಾರ್ದನ ರೆಡ್ಡಿ ಹೆಚ್ಚುವರಿ ಆಸ್ತಿ ಜಪ್ತಿ: ಹೈಕೋರ್ಟ್‌ ಮೊರೆ ಹೋದ ಸಿಬಿಐ

09:59 PM Jan 05, 2023 | Team Udayavani |

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸೇರಿದ ಹೆಚ್ಚುವರಿ 219 ಆಸ್ತಿಗಳನ್ನು ಜಪ್ತಿ ಮಾಡುವ ಸಂಬಂಧ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಅನುಮತಿ ನೀಡುವಂತೆ ಸಲ್ಲಿಸಿರುವ ಮನವಿಯನ್ನು ತುರ್ತಾಗಿ ಪರಿಗಣಿಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಿಬಿಐ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅರ್ಜಿ ಇನ್ನೂ ವಿಚಾರಣೆಗೆ ಬರಬೇಕಿದೆ.

Advertisement

ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಜನಾರ್ದನ ರೆಡ್ಡಿ ಗಳಿಸಿರುವ ಹೆಚ್ಚುವರಿ ಆಸ್ತಿಗಳನ್ನು ಜಪ್ತಿ ಮಾಡಲು ವಿಶೇಷ ನ್ಯಾಯಾಲಯದ ಮೊರೆ ಹೋಗಲು ಅನುಮತಿ ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗೆ 2022ರ ಆಗಸ್ಟ್‌ 30ರಂದು ಮನವಿ ಸಲ್ಲಿಸಲಾಗಿದೆ.

ತಮ್ಮ ಮತ್ತು ಕುಟುಂಬ ಸದಸ್ಯರಿಗೆ ಸೇರಿದ ಕರ್ನೂಲ್‌, ಹೈದರಾಬಾದ್‌ ಮತ್ತು ರಂಗಾ ರೆಡ್ಡಿ ಜಿಲ್ಲೆಗಳಲ್ಲಿ ಗುರುತಿಸಲಾಗಿರುವ ಸುಮಾರು 19.14 ಕೋಟಿ ರೂ. ಬೆಲೆ ಬಾಳುವ ಆಸ್ತಿಗಳನ್ನು ಮಾರಾಟ ಮಾಡಲು ಜನಾರ್ದನ ರೆಡ್ಡಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಕರ್ನಾಟಕ ಸರಕಾರ ಕ್ರಮ ಕೈಗೊಳ್ಳಲು ವಿಫ‌ಲವಾಗಿದೆ.

ರೆಡ್ಡಿ ಅಕ್ರಮವಾಗಿ ಆಸ್ತಿ ಮಾರಾಟ ಮಾಡಲು ಮುಂದಾಗುತ್ತಿದ್ದು, ಅವುಗಳ ನೋಂದಣಿ ಮಾಡದಂತೆ ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ರಿಜಿಸ್ಟ್ರಾರ್‌ ಅವರಿಗೆ ಮನವಿ ಮಾಡಲಾಗಿದೆ ಎಂದು ಸಿಬಿಐ ಅರ್ಜಿಯಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next