Advertisement
ಕಳೆದ ಡಿ.6ರಂದು ನಡೆದ ಸಭೆಯಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯವು ಈ ಬಗ್ಗೆ ಪ್ರಸ್ತಾಪಿಸಿದ್ದು, ಅಕಾಡೆಮಿಯ ಉನ್ನತ ಹುದ್ದೆಯಲ್ಲಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ. ಖ್ಯಾತ ಕಲಾವಿದ ಎಂ.ಎಫ್.ಹುಸೇನ್ ಸೇರಿದಂತೆ ಅನೇಕರ ಕಲಾಕೃತಿಗಳು ನಾಪತ್ತೆಯಾಗಿರುವುದು ಸೇರಿದಂತೆ ಅಕಾಡೆಮಿಗೆ ಸಂಬಂಧಿಸಿ ಹಲವು ದೂರುಗಳು ಕೇಳಿಬಂದಿದ್ದವು. ಈ ಪ್ರಕರಣದಲ್ಲಿ ಅಕಾಡೆಮಿ ಕಾರ್ಯದರ್ಶಿ ಸುಧಾಕರ್ ಶರ್ಮಾ ಅವರ ಪಾತ್ರವಿರಬಹುದೇ ಎಂಬ ಶಂಕೆಯೂ ವ್ಯಕ್ತವಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಅಕಾಡೆಮಿ ಆಡಳಿತಾಧಿಕಾರಿ ಚಿ.ಸು. ಕೃಷ್ಣಶೆಟ್ಟಿ, “ನಾನು ಅಧಿಕಾರ ಸ್ವೀಕರಿಸಿ 3 ತಿಂಗಳಾಗಿದೆ. ಕಲಾಕೃತಿ ಕಾಣೆಯಾಗಿರುವ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಇದು 20 ವರ್ಷಗಳ ಹಿಂದಿನ ಪ್ರಕರಣ’ ಎಂದು ಹೇಳಿದ್ದಾರೆ. Advertisement
ಲಲಿತಕಲಾ ಅಕಾಡೆಮಿ ವಿರುದ್ಧ ಸಿಬಿಐ ತನಿಖೆ?
03:45 AM Mar 02, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.