Advertisement

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

09:11 AM May 17, 2022 | Team Udayavani |

ನವದೆಹಲಿ: ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳು ದೆಹಲಿ, ಮುಂಬೈ ಚೆನ್ನೈ ಮತ್ತು ತಮಿಳುನಾಡಿನ ಶಿವಗಂಗೈನಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಗೆ ಸೇರಿದ ಅನೇಕ ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ವರದಿಯಾಗಿದೆ.

Advertisement

ಪುತ್ರ ಕಾರ್ತಿ ಚಿದಂಬರಂ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ನಗರಗಳಾದ್ಯಂತ ಮಾಜಿ ಸಚಿವ ಪಿ. ಚಿದಂಬರಂ ಅವರಿಗೆ ಸೇರಿದ ಸುಮಾರು ಏಳು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ

ಮೂಲಗಳ ಪ್ರಕಾರ, 2010ರಿಂದ 2014ರ ನಡುವೆ ನಡೆದ ವಿದೇಶಿ ಹಣ ರವಾನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂ ವಿರುದ್ಧ ಸಿಬಿಐ ಹೊಸ ಕೇಸು ದಾಖಲಿಸಿಕೊಂಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next