Advertisement

ಡಿ.ಕೆ. ಶಿವಕುಮಾರ್‌ ಅರ್ಜಿ: ಹೈಕೋರ್ಟ್‌ ಬಳಿ ಹೆಚ್ಚಿನ ಕಾಲಾವಕಾಶ ಕೋರಿದ ಸಿಬಿಐ

09:00 PM Sep 26, 2022 | Team Udayavani |

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಎಫ್‌ಐಆರ್‌ ಪ್ರಶ್ನಿಸಿ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕೇಂದ್ರೀಯ ತನಿಖಾ ದಳ (ಸಿಬಿಐ) ಸೋಮವಾರ ಕರ್ನಾಟಕ ಹೈಕೋರ್ಟ್‌ ಬಳಿ ಹೆಚ್ಚಿನ ಕಾಲಾವಕಾಶ ಕೋರಿದೆ.

Advertisement

ನ್ಯಾಯಾಲಯ ವಿಚಾರಣೆಯನ್ನು ದಸರಾ ನಂತರದ ರಜೆಗೆ ಮುಂದೂಡಿದೆ.ಈ ಪ್ರಕರಣವು 2017 ರಲ್ಲಿ ಶಿವಕುಮಾರ್ ಮೇಲಿನ ಆದಾಯ ತೆರಿಗೆ ದಾಳಿಯ ಬಳಿಕ ಆರಂಭವಾಗಿದೆ. ಐಟಿ ಇಲಾಖೆಯ ಮಾಹಿತಿಯಿಂದ ಜಾರಿ ನಿರ್ದೇಶನಾಲಯಕ್ಕೆ (ಇ ಡಿ ),ಬಳಿಕ ಸಿಬಿಐಗೆ ತಲುಪಿತು, ಅದು ಶಿವಕುಮಾರ್ ಅವರನ್ನು ತನಿಖೆ ಮಾಡಲು ಕರ್ನಾಟಕ ಸರ್ಕಾರದ ಅನುಮತಿಯನ್ನು ಕೋರಿತ್ತು.

ರಾಜ್ಯ ಸರಕಾರವು ಸೆ 25, 2019 ರಂದು ಸಿಬಿಐಗೆ ಅನುಮತಿ ನೀಡಿತ್ತು. ಪ್ರಾಥಮಿಕ ವಿಚಾರಣೆಯ ನಂತರ, ಸಿಬಿಐ ಅಕ್ಟೋಬರ್ 3, 2020 ರಂದು ಎಫ್‌ಐಆರ್ ದಾಖಲಿಸಿದೆ. ಈ ಎಫ್‌ಐಆರ್ ವಿರುದ್ಧ ಶಿವಕುಮಾರ್ ನ್ಯಾಯಾಲಯದ ಮೆಟ್ಟಿಲೇರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next