Advertisement
ಅರ್ಹ ಅಧಿಕಾರಿಗಳ ಹೆಸರುಗಳು ಮತ್ತು ಅವರ ವಿವರಗಳನ್ನು ಸಮಿತಿಯ ಸದಸ್ಯರಿಗೆ ನೀಡಲಾಗಿತ್ತು. ಆದರೂ, ಅಂತಿಮ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಲಿಲ್ಲ. ಸದ್ಯದಲ್ಲೇ ಮತ್ತೂಂದು ಸಭೆ ಕರೆದು, ಹೆಸರುಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಪ್ರಧಾನಿ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೂ ಭಾಗಿಯಾಗಿದ್ದರು. ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳ ನಡುವೆ ಉಂಟಾದ ಕಲಹದಿಂದಾಗಿ ಜ.10ರಿಂದಲೇ ಸಿಬಿಐ ನಿರ್ದೇಶಕರ ಹುದ್ದೆ ಖಾಲಿಯಿದೆ. ಸದ್ಯ ಎಂ. ನಾಗೇಶ್ವರ್ ರಾವ್ರನ್ನು ಮಧ್ಯಂತರ ನಿರ್ದೇಶಕರಾಗಿ ನೇಮಿಸಲಾಗಿದೆ.
Advertisement
ಸಿಬಿಐ: ಆಯ್ಕೆ ಸಭೆ ವಿಫಲ
12:30 AM Jan 25, 2019 | |
Advertisement
Udayavani is now on Telegram. Click here to join our channel and stay updated with the latest news.