Advertisement

INX ಮೀಡಿಯಾ ಪ್ರಕರಣ : ಮಾಜೀ ಹಣಕಾಸು ಸಚಿವ ಚಿದಂಬರಂ ನಾಪತ್ತೆ

09:14 AM Aug 22, 2019 | Hari Prasad |

ನವದೆಹಲಿ: ಐ.ಎನ್.ಎಕ್ಸ್. ಮೀಡಿಯಾ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಮಾಜೀ ಕೆಂದ್ರ ಸಚಿವ ಪಿ. ಚಿದಂಬರಂ ಅವರಿಗೆ ಬಂಧನದ ಭೀತಿ ಕಾಡುತ್ತಿದೆ.

Advertisement

ಚಿದಂಬರಂ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಉಚ್ಛ ನ್ಯಾಯಾಲಯವು ಇಂದು ತಿರಸ್ಕರಿಸಿತ್ತು. ಬಳಿಕ ಚಿದಂಬರಂ ಅವರು ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮೆಟ್ಟಿಲನ್ನು ಹತ್ತಲು ನಿರ್ಧರಿಸಿದ್ದಾರೆ ಮತ್ತು ಅವರ ಅಲ್ಲಿ ಅವರ ಅರ್ಜಿಯ ವಿಚಾರಣೆ ಬುಧವಾರದಂದು ನಡೆಯಲಿದೆ.

ಈತನ್ಮಧ್ಯೆ ದಿಢೀರ್ ಬೆಳವಣಿಗೆಯೊಂದರಲ್ಲಿ ಸಿಬಿಐ ತಂಡವೊಂದು ಚಿದಂಬರಂ ಅವರನ್ನು ವಶಕ್ಕೆ ಪಡೆದುಕೊಳ್ಳಲು ಜೋರ್ ಭಾಗ್ ನಲ್ಲಿರುವ ಅವರ ನಿವಾಸಕ್ಕೆ ತೆರಳಿತ್ತು. ಆದರೆ ಅವರು ಮನೆಯಲ್ಲಿ ಇಲ್ಲದೇ ಇದ್ದ ಕಾರಣದಿಂದ ಈ ತಂಡವು ಇದೀಗ ಬರಿಗೈಯಲ್ಲಿ ವಾಪಾಸಾಗಿದೆ ಎಂದು ತಿಳಿದುಬಂದಿದೆ.

ಉನ್ನತ ಮೂಲಗಳಿಂದ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಚಿದಂಬರಂ ಅವರು ಸದ್ಯಕ್ಕೆ ಯಾವುದೇ ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರು ತಮ್ಮ ಮೊಬೈಲ್ ಫೋನನ್ನೂ ಸಹ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಸಿಬಿಐ ಅಧಿಕಾರಿಗಳು ಚಿದಂಬರಂ ಅವರಿಗಾಗಿ ತಮ್ಮ ಶೋಧವನ್ನು ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next