Advertisement

ಫೋನ್‌ ಕದ್ದಾಲಿಕೆ ಪ್ರಕರಣ ತನಿಖೆ ಸಿಬಿಐಗೆ: ಬಿಎಸ್‌ ವೈ

10:25 AM Aug 19, 2019 | Team Udayavani |

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಹಲವು ದಿನಗಳಿಂದ ಸುದ್ದಿ ಮಾಡುತ್ತಿರುವ ಫೋನ್‌ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದೇನೆ ಎಂದು ಮುಖ್ಯಮಂತ್ರಿ  ಬಿ ಎಸ್‌ ಯಡಿಯೂರಪ್ಪ ಹೇಳಿದ್ದಾರೆ.

Advertisement

ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಪೋನ್ ಕದ್ದಾಲಿಕೆ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆ‌ ನಡೆಸಲು ಆದೇಶ ಮಾಡಲಾಗಿದೆ. ನಾಳೆ ಈ ಸಂಬಂಧ ಆದೇಶ ಹೊರಡಿಸಲಾಗುವುದು.‌ ಈ ಬಗ್ಗೆ ಸಮಗ್ರ ‌ತನಿಖೆ ‌ನಡೆದು ಸತ್ಯಾಂಶ ಹೊರ ಬರಬೇಕು ತಪ್ಪಿತಸ್ಥರ ವಿರುದ್ದ ಕ್ರಮವಾಗಬೇಕು. ಹೀಗಾಗಿ ಪೋನ್ ಕದ್ದಾಲಿಕೆ ‌ಪ್ರಕರಣದ ತನಿಖೆಯನ್ನು ಸಿಬಿಐಗೆ‌ ವಹಿಸಲಾಗಿದೆ ಎಂದು ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next