Advertisement

ತಾಲೂಕಿಗೊಂದು ಸಿಬಿಎಸ್‌ಸಿ ಶಾಲೆ: ಸಚಿವ ರೇವಣ್ಣ

06:10 AM Sep 17, 2018 | Team Udayavani |

ಹಾಸನ: ರಾಜ್ಯದಲ್ಲಿ ತಾಲೂಕಿಗೊಂದು ಸಿಬಿಎಸ್‌ಸಿ ಪಠ್ಯಕ್ರಮದ ಪ್ರಾಥಮಿಕ ಶಾಲೆಯನ್ನು ಸರ್ಕಾರದಿಂದಲೇ ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಹೇಳಿದರು.

Advertisement

ನಗರದಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಪೋಷಕರು ಇಂಗ್ಲಿಷ್‌ ಮಾಧ್ಯಮ ಹಾಗೂ ಸಿಬಿಎಸ್‌ಸಿ ಪಠ್ಯಕ್ರಮದ ಶಿಕ್ಷಣವನ್ನು ಮಕ್ಕಳಿಗೆ ಕೊಡಿಸಬೇಕೆಂದು ಆಸೆ ಪಡುತ್ತಾರೆ. ಹಾಗಾಗಿ, ಪ್ರಾಯೋಗಿಕವಾಗಿ ತಾಲೂಕಿಗೊಂದು ಸರ್ಕಾರಿ ಶಾಲೆಯಲ್ಲಿ ಸಿಬಿಎಸ್‌ಸಿ ಪಠ್ಯಕ್ರಮ ಆರಂಭಿಸಲಾಗುವುದು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಅಗತ್ಯವಿರುವ ಅನುದಾನ ಬಿಡುಗಡೆಗೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next