Advertisement

CCB Police ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ

12:20 AM Sep 29, 2023 | Team Udayavani |

ಮಂಗಳೂರು: ಅಡ್ಯಾರ್‌ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Advertisement

ಬಂಟ್ವಾಳ ತಾಲೂಕು ಫರಂಗಿಪೇಟೆ ಅಮ್ಮೆಮಾರ್‌ರೈಲ್ವೇ ಸೇತುವೆ ಬಳಿಯ ನಿವಾಸಿ ತಸ್ಲೀಮ್ ಯಾನೇ ಗರುಡ ತಸ್ಲೀಮ್ (34), ಅಮ್ಮೆಮಾರ್‌ ಮಸೀದಿ ಬಳಿಯ ನಿವಾಸಿ ಹೈದರಾಲಿ ಯಾನೆ ಹೈದು (26) ಬಂಧಿತರು.

ಈ ಹಿಂದೆ ಕೊಲೆ, ಕೊಲೆಯತ್ನ, ಜಾನುವಾರು ಕಳ್ಳತನ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ತಂಡವೊಂದು ಅಡ್ಯಾರ್‌ ಪರಿಸರದಲ್ಲಿ ತಲವಾರುಗಳೊಂದಿಗೆ ಮತ್ತೊಂದು ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಆರೋಪಿಗಳಿಂದ 2 ತಲವಾರು, 1 ಚೂರಿ, 2 ಮೊಬೈಲ್‌ ಫೋನ್‌ ಹಾಗೂ ಕೇರಳ ನೋಂದಣಿಯ ಮಹೇಂದ್ರ ಪಿಕ್‌ ಅಪ್‌ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next